SHIVAMOGGA LIVE NEWS | 24 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SAGARA : ಎರಡು ದಿನಗಳ ಧಾರ್ಮಿಕ ಕಾರ್ಯಕ್ರಮ ಅಂಗವಾಗಿ ಭಾನುವಾರ ಸಂಜೆ ಶೃಂಗೇರಿ (Sringeri) ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ಸಾಗರಕ್ಕೆ ಆಗಮಿಸಿದರು. ಸಾಗರದ ಶಾರದಾಂಬಾ ದೇವಸ್ಥಾನದಲ್ಲಿ ಭಕ್ತರಿಗೆ ಆಶೀರ್ವಾದ ನೀಡಿದರು.
ಸುರಿವ ಮಳೆಯಲ್ಲೂ ವೈಭವದ ಸ್ವಾಗತ
ಸುರಿಯುತ್ತಿರುವ ಮಳೆಯಲ್ಲೇ ಭಕ್ತರು ಶ್ರೀಗಳಿಗೆ ಭವ್ಯ ಸ್ವಾಗತ ಕೋರಿದರು. ಮಂತ್ರಘೋಷದೊಂದಿಗೆ ಸಾಗರದ ಶಿವಪ್ಪ ನಾಯಕ ವೃತ್ತದಿಂದ ನಗರದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯಿತು. ಚಂಡೆ, ನಗಾರಿ, ನಾದಸ್ವರ, ವಿವಿಧ ಚದ್ಮವೇಷಗಳು ಮೆರವಣಿಗೆಗೆ ಮೆರುಗು ತಂದವು. ಜೋಗ ರಸ್ತೆಯಲ್ಲಿರುವ ಚಾರೋಡಿ ಕೊಂಕಣಿ ಆಚಾರ್ ಸಮಾಜದ ಶಾರದಾಂಬ ದೇವಾಲಯಕ್ಕೆ ಶ್ರೀಗಳನ್ನು ಕರೆತರಲಾಯಿತು.

ಸಾಗರಕ್ಕೆ ಆಗಮಿಸಿದ ಶೃಂಗೇರಿ ಶ್ರೀಗಳ ಆಶೀರ್ವಾದ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ
ಶಂಕರ ಮಠದ ಧರ್ಮಾಧಿಕಾರಿ ಅಶ್ವಿನಿಕುಮಾರ್, ಚಾರೋಡಿ ಕೊಂಕಣಿ ಆಚಾರ್ ಸಮಾಜದ ಅಧ್ಯಕ್ಷ ಕೆ.ವಿ.ಜಯರಾಮ್ ಹಾಗೂ ವಿವಿಧ ಸಮಾಜದ ಮುಖಂಡರು ಇದ್ದರು. ಜೂ.24ರ ಬೆಳಗ್ಗೆ ಶ್ರೀಗಳು ಅಮ್ಮನವರ ಮರು ಪ್ರತಿಷ್ಠಾಪನೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದು ನಂತರ ಶಾರದಾಂಬ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಶ್ರೀಗಳು ಶ್ರೀ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ – ಕರ್ನಾಟಕದ 10 ಜಿಲ್ಲೆಗಳಿಗೆ ಇವತ್ತು ಆರೆಂಜ್ ಅಲರ್ಟ್, 6 ಜಿಲ್ಲೆಗಳಿಗೆ ಯಲ್ಲೊ ಅಲರ್ಟ್
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





