SHIVAMOGGA LIVE NEWS | 24 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
NATIONAL NEWS : 18ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನ ಇವತ್ತಿನಿಂದ ಆರಂಭವಾಗಿದೆ. ನೂತನ ಲೋಕಸಭೆ ಸದಸ್ಯರು ಇವತ್ತು ಪ್ರಮಾಣ ವಚನ (Oath) ಸ್ವೀಕರಿಸಿದರು. ಮೊದಲ ದಿನವೇ ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಪ್ರಮಾಣ ವಚನ ಸ್ವೀಕರಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಅವರು ಕನ್ನಡದಲ್ಲಿ ಪ್ರತಿಜ್ಞೆ ಸ್ವಿಕರಿಸಿದರು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ‘ಮತದಾರ ದೇವರುಗಳʼ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಹಂಗಾಮಿ ಸ್ಪೀಕರ್ ಭತೃಹರಿ ಮೆಹ್ತಾಬ್ ಅವರಿಗೆ ಧನ್ಯವಾದ ತಿಳಿಸಿದರು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಪ್ರಮಾಣ ವಚನ ಸ್ವೀಕರಿಸಿದರು
ಅಧಿವೇಶನ ಆರಂಭಕ್ಕೂ ಮೊದಲು ಬಿಜೆಪಿ ಸಂಸದ ಭತೃಹರಿ ಮೆಹ್ತಾಬ್ ಅವರಿಗೆ ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ಆ ಬಳಿಕ ಅಧಿವೇಶನದಲ್ಲಿ ಲೋಕಸಭೆ ಸದ್ಯಸರು ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕ್ಯಾಬಿನೆಟ್ ಸಚಿವರು, ಸಂಸದರು ಪ್ರತಿಜ್ಞೆ ಸ್ವೀಕರಿಸಿದರು.
ಇದನ್ನೂ ಓದಿ – ಕಾರು ಡಿಕ್ಕಿಯಾಗಿ ಮುರಿದು ಬಿದ್ದ ವಿದ್ಯುತ್ ಕಂಬ, CCTVಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





