ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 JUNE 2024
SAGARA : ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಗರಸಭೆಗೆ ದಿಢೀರ್ ಭೇಟಿ (SUDDEN VISIT) ನೀಡಿ ಪರಿಶೀಲಿಸಿದರು. ಅಧಿಕಾರಿಗಳು ತ್ವರಿತವಾಗಿ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಾಗರ ಕ್ಷೇತ್ರದ ಅಭಿವೃದ್ಧಿಗೆ ತಾವು ಅನುದಾನ ತಂದಿಲ್ಲ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ ಮೀನು ಮಾರುಕಟ್ಟೆಗೆ 1.20 ಕೋಟಿ ರೂ., ಮಿನಿ ವಿಧಾನಸೌಧಕ್ಕೆ 4.80 ಕೋಟಿ ರೂ., ಆಸ್ಪತ್ರೆಗೆ 1.70 ಕೋಟಿ ರೂ. ಹೀಗೆ ಎಲ್ಲ ಕಡೆ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಸರ್ಕಾರದ ಬಳಿ ಹಣವಿಲ್ಲ. ನಾನು ಅನುದಾನ ತಂದಿಲ್ಲ ಎಂದು ಹೇಳುವವರು ಇದನ್ನೆಲ್ಲ ಗಮನಿಸಬೇಕು. ಈ ಬಾರಿ 3.71 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಲಾಗಿತ್ತು. ಮುಂದಿನ ವರ್ಷ 4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸುವ ನಿರೀಕ್ಷೆ ಇದೆ. ಇದರಿಂದ ಅಭಿವೃದ್ಧಿಗೆ ಅನುದಾನ ಕಡಿಮೆ ಆಗುವುದಿಲ್ಲ ಎಂದು ತಿಳಿಸಿದರು.
ಒತ್ತುವರಿ ತೆರವು ಮಾಡಿದ ಗೋಶಾಲೆ
ನಾಡಕಲಸಿ ಗ್ರಾಮದಲ್ಲಿ ಗೋಶಾಲೆ ಜಾಗವನ್ನು ಯಾರೇ ಒತ್ತುವರಿ ಮಾಡಿಕೊಂಡಿಕೊಂಡಿದ್ದರು ತೆರವು ಮಾಡಿಸುತ್ತೇವೆ. ಅಲ್ಲಿ ಗೋಶಾಲೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಗೋಶಾಲೆ ನಿರ್ಮಾಣದ ಬಳಿಕ ಉಳಿದ ಜಾಗವನ್ನು ವಸತಿ ಶಾಲೆಗಳ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ಯತೀಶ್, ನಗರಸಭೆ ಸದಸ್ಯರಾದ ಗಣಪತಿ ಮಂಡಗಳಲೆ, ತಸೀಫ್, ಹಮೀದ್, ರವಿಕುಮಾರ್ ಇದ್ದರು.
ಇದನ್ನೂ ಓದಿ – ಆನಂದಪುರ ಬಳಿ ಅಪಘಾತದಲ್ಲಿ ತೀವ್ರ ಗಾಯಗೊಂಡು ಯಕ್ಷಗಾನ ಭಾಗವತ ಸಾವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






