ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 JUNE 2024
SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಚುನಾವಣೆ (election) ಆರಂಭವಾಗಿದೆ. ಬಾಲರಾಜ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ ಆವರಣದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಈಗಾಗಲೆ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಉಳಿದ 12 ನಿರ್ದೇಶಕರ ಆಯ್ಕೆಗೆ ಮತದಾನ ನಡೆಯುತ್ತಿದೆ.
ಮತ ಚಲಾಯಿಸಿದ ಸಂಸದ ರಾಘವೇಂದ್ರ
ಡಿಸಿಸಿ ಬ್ಯಾಂಕ್ ಆವರಣದಲ್ಲಿ ಬೆಳಗ್ಗೆಯಿಂದಲೆ ಮತದಾನ ಪ್ರಕ್ರಿಯೆ ಬಿರುಸಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ತಮ್ಮ ಹಕ್ಕು ಚಲಾಯಿಸಿದರು. ಅಹಿತಕರ ಘಟನೆ ತಡೆಯಲು ಮತಗಟ್ಟೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ – ತೀವ್ರ ಕುತೂಹಲ ಮೂಡಿಸಿದೆ ಡಿಸಿಸಿ ಬ್ಯಾಂಕ್ ಚುನಾವಣೆ, ಕಣದಲ್ಲಿದ್ದಾರೆ 28 ಅಭ್ಯರ್ಥಿಗಳು, ಇಲ್ಲಿದೆ ಲಿಸ್ಟ್
ಇನ್ನು, ಮತದಾನ ಮಾಡಲು ತೆರಳುವವರು ತಮ್ಮ ಮೊಬೈಲ್ ಫೋನ್ಗಳನ್ನು ಮತಗಟ್ಟೆಯೊಳಗೆ ಕೊಂಡೊಯ್ಯುವಂತಿಲ್ಲ. ಆದ್ದರಿಂದ ಡಿಸಿಸಿ ಬ್ಯಾಂಕ್ ಆವರಣದಲ್ಲಿಯೇ ಮೊಬೈಲ್ಗಳನ್ನು ಪಡೆದು, ಅದರ ಮೇಲೆ ಹೆಸರು ಬರೆದಿಡಲಾಗುತ್ತಿದೆ. ಮತ ಚಲಾಯಿಸಿ ಬಂದ ಮೇಲೆ ಮೊಬೈಲ್ ಹಿಂತಿರುಗಿಸಲಾಗುತ್ತಿದೆ.

ಸಂಜೆಯೇ ಫಲಿತಾಂಶ ಪ್ರಕಟ
12 ನಿರ್ದೇಶಕರ ಆಯ್ಕೆಗೆ ಮತದಾನ ಆರಂಭವಾಗಿದೆ. ಒಟ್ಟು 27 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿ ಹಲವರು ಕಣದಲ್ಲಿದ್ದಾರೆ. ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸಂಜೆ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ – ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಜೋಗ, ಮೈದುಂಬಿದ ರಾಜ, ರಾಣಿ, ರೋರರ್, ರಾಕೆಟ್
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು














