ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 JUNE 2024
BHADRAVATHI : ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL) ಭೇಟಿ ನೀಡಿದ್ದರು. ವಿವಿಧ ಘಟಕಗಳಿಗೆ ತೆರಳಿ ಪರಿಶೀಲಿಸಿದರು. ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಕಾರ್ಖಾನೆಗೆ ಭೇಟಿ, ಪರಿಶೀಲನೆ
ವಿಐಎಸ್ಎಲ್ ಕಾರ್ಖಾನೆ ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಲಾರ್ಪಣೆ ಮಾಡಿದರು. ಬಳಿಕ ಕಾರ್ಖಾನೆಯ ಪ್ರೈಮರಿ ಮಿಲ್, ಸ್ಟೀಲ್ ಮೇಕಿಂಗ್ ವಿಭಾಗ, ಫೋರ್ಜ್ ವಿಭಾಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದರು. ಇದೇ ವೇಳೆ ಕಾರ್ಮಿಕರಿಂದಲು ಮಾಹಿತಿ ಪಡೆದರು.

ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್
ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿಯ ಬಳಿಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಐಎಸ್ಎಲ್ ಆಡಳಿತ ಮಂಡಳಿ ಜೊತೆಗೆ ಸಭೆ ನಡೆಸಿದರು. ಕಾರ್ಖಾನೆ ಪುನಶ್ಚೇತನ ಸಂಬಂಧ ಮಹತ್ವ ಚರ್ಚೆ ನಡೆಯಿತು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಶಾರದಾ ಪೂರ್ಯಾನಾಯ್ಕ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿಗೌಡ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು ಹಾಕಿದ ಚನ್ನಸಬಪ್ಪ, ಕಾರಣವೇನು?
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು





