SHIVAMOGGA LIVE NEWS | 10 JULY 2024
SHIKARIPURA : ಡೆಂಗ್ಯು ಉಲ್ಬಣವಾಗಿರುವ ಹಿನ್ನೆಲೆ ಶಾಸಕ ಬಿ.ವೈ. ವಿಜಯೇಂದ್ರ ಅವರು ಶಿರಾಳಕೊಪ್ಪದ ಪಟ್ಟಣ ಸಮುದಾಯ ಆರೊಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ವಿವಿಧ ವಿಭಾಗಗಳಿಗೆ ತೆರಳಿ ವೀಕ್ಷಿಸಿದರು. ರೋಗಿಗಳು, ಸಂಬಂಧಿಕರ ಜೊತೆಗೆ ಮಾತನಡಿ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಉತ್ತಮ ಸೇವೆ ನೀಡಬೇಕು
ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹಲವು ಯೋಜನೆ ನೀಡುತ್ತಿದೆ. ವೈದ್ಯರು ರೋಗಿಗಳಿಗೆ ಉತ್ತಮ ಸೇವೆ ನೀಡಬೇಕು. ಆರೋಗ್ಯ ಸಿಬ್ಬಂದಿ ಜನರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡಬೇಕು ಎಂದು ವಿಜಯೇಂದ್ರ ತಿಳಿಸಿದರು. ಆಸ್ಪತ್ರೆಯಲ್ಲಿ ದಾಖಲಾದ ಒಳರೋಗಿಗಳನ್ನು ಮಾತನಾಡಿಸಿ, ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
50 ಹಾಸಿಗೆ ಆಸ್ಪತ್ರೆ ಕಾಮಗಾರಿ ಪರಿಶೀಲನೆ
ನಿರ್ಮಾಣ ಹಂತದಲ್ಲಿರುವ 50 ಹಾಸಿಗೆಯ ಆಸ್ಪತ್ರೆಗೆ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದರು. ಆಸ್ಪತ್ರೆಗೆ ಅಗತ್ಯವಿರುವ ಸೌಕರ್ಯಗಳ ಪಟ್ಟಿ ಹಾಗೂ ಅವಶ್ಯಕತೆ ಇರುವ ಸಿಬ್ಬಂದಿ ಪಟ್ಟಿಯನ್ನು ನೀಡಿದರೆ ಸರ್ಕಾರದಿಂದ ಮಂಜೂರು ಮಾಡಿಸುವುದಾಗಿ ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ವೈದ್ಯಾಧಿಕಾರಿ ಡಾ. ಮಹಾಲಿಂಗ ಕೊಲ್ಲೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿರೇಂದ್ರ ಪಾಟೀಲ್, ಟೌನ್ ಅಧ್ಯಕ್ಷ ಚೆನ್ನವೀರ ಶೆಟ್ಟಿ ಇದ್ದರು.
ಇದನ್ನೂ ಓದಿ – ಡೆಂಗ್ಯು ಶಂಕೆ, ಜ್ವರದಿಂದ ಬಳಲುತ್ತಿದ್ದ ರಿಪ್ಪನ್ಪೇಟೆಯ ಮಹಿಳೆ, ಶಿರಾಳಕೊಪ್ಪದ 9 ತಿಂಗಳ ಮಗು ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200