ಶಿವಮೊಗ್ಗದಲ್ಲಿ ಹೆಜ್ಜಾರು ಸಿನಿಮಾ ಟೀಮ್‌ | ಸಾಹಸ ಪ್ರವಾಸೋದ್ಯಮ ಕಾರ್ಯಾಗಾರ – 3 ಫಟಾಟಫ್‌ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 JULY 2024

FATAFAT NEWS : ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಸುದ್ದಿಗಳು ಇಲ್ಲಿವೆ. ಒಂದೊಂದೆ ಸುದ್ದಿಯನ್ನು ನಂಬರ್‌ ಸಹಿತ ಪ್ರಕಟಿಸಲಾಗಿದೆ.

#fee3a8

ಜು.19ಕ್ಕೆ ಹೆಜ್ಜಾರು ಸಿನಿಮಾ ರಿಲೀಸ್‌

Hejjaru-Kannada-Movie-cinema-team-in-Shimoga.

SHIMOGA : ಕನ್ನಡದ ಮೊಟ್ಟಮೊದಲ ಪ್ಯಾರಲಲ್‌ ಲೈಫ್‌ನ ಕಥೆಯುಳ್ಳ ಹೆಜ್ಜಾರು ಸಿನಿಮಾ (Movie) ಜು.19ರಂದು ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಹರ್ಷಪ್ರಿಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬ್ಬರ ಜೀವನದಲ್ಲಿ ನಡೆದ ಘಟನೆಯೇ, ವಿಭಿನ್ನ ಕಥೆ ಹೊಂದಿರುವ ಕನ್ನಡದ ಮೊದಲ ಪ್ಯಾರಲಲ್ ಲೈಫ್ ಆಧಾರಿತ ಸಿನಿಮಾ ಇದು. ಸಿನಿಮಾ ಕ್ಷೇತ್ರದ ಹಿರಿಯರು ಹಾಗೂ ಹೊಸಬರು ಸೇರಿ ಈ ಸಿನಿಮಾ ನಿರ್ಮಾಣ ಮಾಡಿರುವುದು ವಿಶೇಷ. ಈಗಾಗಲೇ ಚಿತ್ರದ ಟೀಸರ್ ಅತ್ಯಂತ ಯಶಸ್ವಿಯಾಗಿದೆ. ಇತ್ತೀಚೆಗೆ ಕಿಚ್ಚ ಸುದೀಪ್ ಚಿತ್ರದ ಟೀಸರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂರು ಹಾಡುಗಳಿದ್ದು, ನಾನೇ ಸಾಹಿತ್ಯ ಬರೆದಿದ್ದೇನೆ ಎಂದು ತಿಳಿಸಿದರು. ನಾಯಕಿ ಶ್ವೇತಾ ಡಿಸೋಜ ಸುದ್ದಿಗೋಷ್ಠಿಯಲ್ಲಿದ್ದರು.

#d3effa

ಸಾಹಸ ಪ್ರವಾಸೋದ್ಯಮ ಕಾರ್ಯಾಗಾರ

SHIMOGA : ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೆಟಿಟಿಎಫ್ ಕಾಯ್ದೆಯಡಿ ನೊಂದಣಿ ಮಾಡಿಸಿಕೊಂಡು ಪ್ರಮಾಣಪತ್ರ ಪಡೆಯಲು ಆಸಕ್ತ ಉದ್ದಿಮೆದಾರರಿಗೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಜು. 16ರ ಬೆಳಗ್ಗೆ 10ಕ್ಕೆ ಸಂತೆ ಕಡೂರಿನ ಮಲ್ನಾಡ್ ಶೈ‌ರ್ ಸಭಾಂಗಣದಲ್ಲಿ ಕಾರ್ಯಾಗಾರ ಆಯೋಜಿಸಿದೆ. ಕಾರ್ಯಾಗಾರದಲ್ಲಿ ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವವರು, ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸಲು ಆಸಕ್ತಿಯುಳ್ಳ ಉದ್ಯಮದಾರರು ಅಥವಾ ಪ್ರವಾಸೋದ್ಯಮ ಪಾಲುದಾರರು ಭಾಗವಹಿಸಬಹುದು. ಮಾಹಿತಿಗೆ ದೂ. 08182 251444, 70262 96510 ಸಂಪರ್ಕಿಸಿ.

#fee3a8

ಗುರುದಕ್ಷಿಣೆ ಯಕ್ಷಗಾನ ತಾಳಮದ್ದಲೆ

SHIMOGA : ಸಾಗರ ರಸ್ತೆಯ ಬಿಎಸ್‌ಎನ್‌ಎಲ್ ಕಚೇರಿ ಬಳಿ ಇರುವ ಹವ್ಯಕ ಭವನದಲ್ಲಿ ಜು.13ರ ಸಂಜೆ 5ಕ್ಕೆ ಹೊಸೂರಿನ ಭಾರತೀ ಕಲಾ ಮಂಡಲದ ಮಹಿಳಾ ಕಲಾವಿದರು ‘ಗುರುದಕ್ಷಿಣೆ’ ಯಕ್ಷಗಾನ ತಾಳಮದ್ದಲೆ ನಡೆಸಿಕೊಡಲಿದ್ದಾರೆ. ಇದನ್ನು ಹೊಸೂರಿನ ಗುರುನಂದನ ನಿರ್ದೇಶಿಸಿದ್ದು, ಸೃಜನ್ ಗಣೇಶ್ ಹೆಗಡೆ ಭಾಗವತಿಕೆಯಿದೆ, ಚಂಡೆಯಲ್ಲಿ ಕುಮಾರ ಶ್ರೀವತ್ಸ, ಮದ್ದಳೆಯಲ್ಲಿ ಮಂಜುನಾಥ ಗುಡ್ಡೆದಿಂಬ ಸಹಕರಿಸಲಿದ್ದಾರೆ. ಮುಮ್ಮೇಳದಲ್ಲಿ ಕುಸುಮಾ ಶ್ರೀಕಾಂತ ರಾವ್, ಅಂಬಿಕಾ ಸತೀಶ್ಚಂದ್ರ, ವಾಗೇಶ್ವರಿ ಸುರೇಶ್ ಭಟ್, ನಯನತಾರಾ ಸತೀಶ್ ಮುಂತಾದವರಿದ್ದಾರೆ.‌

ಇದನ್ನೂ ಓದಿ – ಶಿವಮೊಗ್ಗ MLA ನೇತೃತ್ವದಲ್ಲಿ ತುರ್ತು ಮೀಟಿಂಗ್‌, ಅಧಿಕಾರಿಗಳಿಗೆ ಖಡಕ್‌ ಸೂಚನೆ, ಏನೆಲ್ಲ ಹೇಳಿದ್ರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment