ತಹಶೀಲ್ದಾರ್‌ ಕಚೇರಿಯಲ್ಲಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ, ಡೆತ್‌ ನೋಟ್‌ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JULY 2024

SAGARA : ಅರೆಹದ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ (Village Accountant) ಕರ್ತವ್ಯ ನಿರ್ವಹಿಸುತ್ತಿರುವ ವಿಮಲಾ ಅವರು ಗುರುವಾರ ಮಧ್ಯಾಹ್ನ ನಗರದ ತಹಸೀಲ್ದಾ‌ರ್ ಕಚೇರಿಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಾತ್ರೆ ಸೇವಿಸಿ ಅಸ್ವಸ್ಥರಾಗಿದ್ದ ಅವರಿಗೆ ಸ್ಥಳೀಯ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪೇಟೆ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ವಿಚಾರಣೆ ನಡೆಸಿದರು.

ವಿಮಲಾ ಅವರ ಬಳಿ ಸಿಕ್ಕಿರುವ ಚೀಟಿಯಲ್ಲಿ ಆರೋಗ್ಯದ ಸಮಸ್ಯೆಯಿದ್ದರೂ ತಹಸೀಲ್ದಾರರು ದೂರದ ಊರಿನಲ್ಲಿ ಕೆಲಸಕ್ಕೆ ಹಾಕಿದ್ದಾರೆ. ಬದಲಾಯಿಸಿಕೊಡಲು ಒಪ್ಪುತ್ತಿಲ್ಲ. ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವುದು ಗೊತ್ತಾಗಿದೆ.

Village-accountant-vimala-sagara-attempt.

ವರ್ಗಾವಣೆಯಿಂದ ಮನನೊಂದಿದ್ದರು

ತಾಲೂಕಿನ ತ್ಯಾಗರ್ತಿ ಮೂಲದ ವಿಮಲಾ ಅವರು ಕಳೆದ ಮೂರ್ನಾಲ್ಕು ವರ್ಷದಿಂದ ಅರೆಹದ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜತೆಯಲ್ಲಿ ಮರತ್ತೂರು ಗ್ರಾಮ ಲೆಕ್ಕಾಧಿಕಾರಿಯಾಗಿಯೂ ಕೆಲಸ ಮಾಡುವಂತೆ ತಹಸಿಲ್ದಾರರು ಅವರಿಗೆ ಸೂಚಿಸಿದ್ದರು. ಆದರೆ ಚುನಾವಣೆ ಸಂದರ್ಭ ಆರೋಗ್ಯದ ಸಮಸ್ಯೆಯಿಂದಾಗಿ ರಜೆ ಹಾಕಿದ್ದು, ಬಳಿಕ ಅವರನ್ನು 150 ದಿನಗಳ ಕಾಲ ಬರೂರು ವೃತ್ತಕ್ಕೆ ವರ್ಗಾಯಿಸಲಾಗಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಮೊದಲಿನ ಸ್ಥಾನಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ತಹಸೀಲ್ದಾರರು ಸೂಚಿಸಿದ್ದರು ಎಂದು ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ.

ಡೆತ್‌ ನೋಟ್‌ ಲಭ್ಯ

“ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ತಮಗೆ, ಮನೆಗೆ ಹತ್ತಿರವಿರುವ ಬರೂರು ವೃತ್ತಕ್ಕೆ ವರ್ಗಾಯಿಸುವಂತೆ ವಿನಂತಿಸಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಅರೆಹದ ಜತೆಯಲ್ಲಿ ಮರತ್ತೂರು ವೃತ್ತವನ್ನೂ ನಿರ್ವಹಿಸುವಂತೆ ನಿರಂತರ ಒತ್ತಡ ಹೇರುತ್ತಿದ್ದಾರೆ. ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು, ರಜೆ ಕೊಡುವಂತೆ ಮನವಿ ಮಾಡಿಕೊಂಡಿದರೂ, ಉಪ ತಹಸೀಲ್ದಾರ್ ಮೂಲಕ ನೋಟಿಸ್ ಕೊಡಿಸಿದ್ದಾರೆ. ಇದಕ್ಕಾಗಿ ಮನನೊಂದು ಆತ್ಮಹತ್ಯೆಗೆ ಮುಂದಾಗಿರುವೆ,” ಎಂದು ಅವರು ಬರೆದಿಟ್ಟಿರುವ ಪತ್ರ ಲಭಿಸಿದೆ.

ಇದನ್ನೂ ಓದಿ – ಶಿವಮೊಗ್ಗ – ಚೆನ್ನೈ ರೈಲಿನ ವೇಳಾಪಟ್ಟಿ ಪ್ರಕಟ, ಎಲ್ಲೆಲ್ಲಿ ಸ್ಟಾಪ್‌ ಇರುತ್ತೆ? ಎಷ್ಟು ಬೋಗಿಗಳಿರುತ್ತವೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 12, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment