ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 JULY 2024
SHIMOGA : ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿ ಮೈದುಂಬಿಕೊಂಡಿದೆ. ನಗರದ ಕೋರ್ಪಲಯ್ಯ ಛತ್ರ ಮಂಟಪ (MANTAPA) ಸಂಪೂರ್ಣ ಮುಳುಗಿದೆ.
ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಮಂಟಪ ಮುಳುಗಿದೆ. ವಿಚಾರ ತಿಳಿದು ಮಂಟಪ ಮುಳುಗಿರುವುದನ್ನು ಕಣ್ತುಂಬಿಕೊಳ್ಳಲು ಜನರು ಹೊಳೆ ಬದಿಗೆ ಬರುತ್ತಿದ್ದಾರೆ. ಹಳೆ ಸೇತುವೆ ಮೇಲೆ ನಿಂತು ಮಂಟಪ ಮುಳುಗಿರುವ ಫೋಟೊ, ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.

ಈ ಮೊದಲು ತುಂಗಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ವರೆಗೆ ನೀರು ಹೊರ ಬಿಟ್ಟಾಗ ಮಾತ್ರ ಮಂಟಪ ಮುಳುಗುತ್ತಿತ್ತು. ಈಗ ತಡೆಗೋಡೆ ನಿರ್ಮಾಣವಾದ ಹಿನ್ನೆಲೆ 61 ಕ್ಯೂಸೆಕ್ ನೀರು ಹೊರ ಬಿಟ್ಟಾಗಲೆ ಮಂಟಪ ಮುಳುಗಿದೆ.

ಇದನ್ನೂ ಓದಿ ⇓
ಭದ್ರಾ ಜಲಾಶಯದ ಒಳ ಹರಿವು ಭಾರಿ ಹೆಚ್ಚಳ, ನೀರಿನ ಮಟ್ಟ 3.4 ಅಡಿ ಏರಿಕೆ
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು





