ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JULY 2024
RAILWAY NEWS : ಹಳಿ (TRACK) ಮೇಲೆ ಬೃಹತ್ ಮರ ಬಿದ್ದಿದ್ದರಿಂದ ತಾಳುಗುಪ್ಪ – ಬೆಂಗಳೂರು ಇಂಟರ್ಸಿಟಿ ರೈಲು ಸಂಚಾರ ಸುಮಾರು 2 ಗಂಟೆ ವ್ಯತ್ಯಯವಾಗಿದೆ. ಹೊಸನಗರ ತಾಲೂಕು ಬಟಾಣಿಜೆಡ್ಡು ಬಳಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಭಾರಿ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಮರ ಬಿದ್ದಿತ್ತು. ಇದನ್ನು ಗಮನಿಸಿದ ಲೋಕೋ ಪೈಲೆಟ್ ರೈಲು ನಿಲ್ಲಿಸಿದ್ದರು. ರೈಲ್ವೆ ಇಲಾಖೆಯ ಇಂಟಿರಿಯರ್ ವರ್ಕ್ ತಂಡದ ಸದಸ್ಯರು ಕೂಡಲೆ ಸ್ಥಳಕ್ಕೆ ತೆರಳಿ ಮರ ತೆರವು ಕಾರ್ಯಾಚರಣೆ ನಡೆಸಿದರು.

ಬೆಳಗ್ಗೆ 5.15ಕ್ಕೆ ತಾಳಗುಪ್ಪದಿಂದ ಹೊರಟಿದ್ದ ರೈಲು ಬೆಳಗ್ಗೆ 7 ಗಂಟೆಗೆ ಶಿವಮೊಗ್ಗ ನಿಲ್ದಾಣ ತಲುಪಬೇಕಿತ್ತು. ಆದರೆ ಬೆಳಗ್ಗೆ 9.05ಕ್ಕೆ ಶಿವಮೊಗ್ಗ ನಿಲ್ದಾಣ ತಲುಪಿದೆ. ಬೆಳಗ್ಗೆ 9.18ಕ್ಕೆ ಶಿವಮೊಗ್ಗ ನಿಲ್ದಾಣದಿಂದ ಹೊರಟಿದೆ. ಈ ರೈಲು ಇವತ್ತು ಅರಸೀಕೆರೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ರೈಲಿನಲ್ಲಿ ಇಲ್ಲ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯ ಪದವಿ ಕಾಲೇಜುಗಳಿಗೆ ರಜೆ ಇದ್ಯಾ? ಜಿಲ್ಲಾಡಳಿತದ ಸ್ಪಷ್ಟನೆ ಏನು?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





