ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JULY 2024
SHIMOGA : ಗೋವಿಂದಾಪುರ ಮತ್ತು ಗೋಪಿ ಶೆಟ್ಟಿಕೊಪ್ಪದಲ್ಲಿ ನಿರ್ಮಿಸಿರುವ ಮನೆಗಳನ್ನು (Houses) ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಬೇಕು ಎಂದು ಆಗ್ರಹಿಸಿ ರಾಷ್ಟ್ರ ಭಕ್ತರ ಬಳಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮರೆವಣಿಗೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಫಲಾನುಭವಿಗಳು ಮುಂಗಡ ಹಣ ಪಾವತಿಸಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. 3000 ಮನೆಗಳ ಪೈಕಿ ಈವರೆಗೆ 288 ಮನೆಗಳನ್ನು ಮಾತ್ರ ವಿತರಣೆ ಮಾಡಲಾಗಿದೆ. ಮನೆಗಾಗಿ ಸಾಲ ಮಾಡಿ ಹಣ ಕಟ್ಟಿದ್ದಾರೆ. ಈಗ ಮನೆಯೂ ಇಲ್ಲ, ಸಾಲವು ತೀರುತ್ತಿಲ್ಲ. ಸರ್ಕಾರ ಕೂಡಲೆ ಮನೆಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕೆ.ಈ. ಕಾಂತೇಶ್, ಈ.ವಿಶ್ವಾಸ್, ಎಂ.ಶಂಕರ್, ಸುವರ್ಣ ಶಂಕರ್, ಶಂಕರ್, ಬಾಲು, ಗನ್ನಿ ಶಂಕರ್, ಕಾಚಿನಕಟ್ಟೆ ಸತ್ಯನಾರಾಯಣ, ಮಹಾಲಿಂಗಶಾಸ್ತ್ರೀ, ಮೋಹನ್. ನಾಗರಾಜ್, ವಾಗೀಶ್, ಶ್ರೀಕಾಂತ್, ಜಾಧವ್ ಮತ್ತಿತರರು ಇದ್ದರು.
ಇದನ್ನೂ ಓದಿ ⇓
ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ನಾಳೆಯೂ ರೆಡ್ ಅಲರ್ಟ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





