ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JULY 2024
SORABA : ಮೀನು ಹಿಡಿಯಲು ಕೆರೆಗೆ ಇಳಿದಿದ್ದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ (Missing). ಆತನಿಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಸೊರಬ ತಾಲೂಕು ಯಡಗೊಪ್ಪ ಗ್ರಾಮದ ಕೆರೆಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಉದ್ರಿ ಗ್ರಾಮದ ಯಲ್ಲಪ್ಪ (50) ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿತ್ತು. ಇದರಿಂದ ನೀರು ರಭಸವಾಗಿ ಹರಿಯುತ್ತಿತ್ತು. ಮೀನು ಹಿಡಿಯಲು ಬಲೆ ಹಾಕಿದ್ದ ಯಲ್ಲಪ್ಪ ಅವರು ಕೆರೆಗೆ ಇಳಿದಿದ್ದರು. ಈ ಸಂದರ್ಭ ನಾಪತ್ತೆಯಾಗಿದ್ದಾರೆ.

ಯಲ್ಲಪ್ಪ ಅವರ ಸಹೋದರ, ಮಕ್ಕಳು ಕೆರೆ ಬಳಿ ಇದ್ದರು ಎನ್ನಲಾಗಿದೆ. ಆದರೆ ನೀರಿನ ರಭಸಕ್ಕೆ ಯಲ್ಲಪ್ಪ ಅವರ ರಕ್ಷಣೆ ಸಾಧ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಜೋರು ಮಳೆಯಿಂದಾಗಿ ಜಿಲ್ಲೆಯಲ್ಲಿ ಹಳ್ಳ – ಕೊಳ್ಳಗಳು, ಕೆರೆ, ಹೊಳೆಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ಸಂದರ್ಭ ಹತ್ಮೀನು ಮತ್ತು ಮೀನು ಹಿಡಿಯಲು ಜನ ಕೆರೆ, ನದಿಗಳಿಗೆ ಇಳಿಯುತ್ತಿದ್ದಾರೆ. ಇದರಿಂದ ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆ ಕೆರೆ, ನದಿಗಳಿಗೆ ಇಳಿಯದಂತೆ ಎಚ್ಚರ ವಹಿಸುವಂತೆ ಪೊಲೀಸರು ಸೂಚಿಸಿದ್ದಾರೆ.
ಇದನ್ನೂ ಓದಿ ⇓
ಶಿವಮೊಗ್ಗ, ಭದ್ರಾವತಿಯಲ್ಲಿ ಲೋಕಾಯುಕ್ತ ದಾಳಿ, ಕೋಟಿ ಕೋಟಿಯ ಮನೆ, ಚಿನ್ನಾಭರಣ ಪತ್ತೆ, ಇಲ್ಲಿದೆ ಪಟ್ಟಿ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















