ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JULY 2024
SHIMOGA : ತುಂಬಿ ಹರಿಯುತ್ತಿರುವ ತುಂಗಾ ನದಿಗೆ ಗಾಜನೂರಿನ ಜಲಾಶಯದಲ್ಲಿ (Dam) ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಬಾಗಿನ ಅರ್ಪಿಸಲಾಯಿತು.
ಇದೇ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳ ಸುಮಾರು 80 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ತುಂಗಾ ಮೇಲ್ದಂಡೆ ಯೋಜನೆ ಮೂಲಕ ನೀರು ಒದಗಿಸಲಾಗುತ್ತಿದೆ. ಇದು ಈ ಭಾಗದ ಜನರ ಜೀವನದಿ. ಕಳೆದ ವರ್ಷ ಮಳೆ ಇಲ್ಲದೆ ಜನರು ತತ್ತರಿಸಿದ್ದರು. ಈ ವರ್ಷ ಉತ್ತಮ ಮಳೆಯಾಗುತ್ತಿದೆ. ರೈತರು ಒಳ್ಳೆ ರೀತಿಯಲ್ಲಿ ನೀರು ಬಳಕೆ ಮಾಡಿಕೊಂಡು ಉತ್ತಮ ಬೆಳೆ ಬೆಳೆಯುವಂತಾಗಲಿ ಎಂದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ತೀರ್ಥಹಳ್ಳಿಯಲ್ಲಿ ವಾಡಿಕೆಗಿಂತಲು ಕಡಿಮೆ ಮಳೆಯಾಗಿದೆ. ಇನ್ನಷ್ಟು ಮಳೆ ಬರಬೇಕಿದೆ. ತುಂಗಾ ಜಲಾಶಯದಲ್ಲಿ ಹೂಳು ತುಂಬಿದೆ. ಮೂರು ಇಲಾಖೆಗಳು ಸೇರಿ ಹೂಳೆತ್ತಬೇಕಿದೆ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಜಲಾಶಯದಲ್ಲಿ ಹೂಳೆತ್ತುವ ಕುರಿತು ಮೂರು ಬಾರಿ ಚರ್ಚೆ ಆಗಿದೆ. ಮೂರ್ನಾಲ್ಕು ಇಲಾಖೆಗಳು ಸೇರಿ ಈ ಕೆಲಸ ಮಾಡಬೇಕಿದೆ. ತುಂಗಾ ಜಲಾಶಯ ಈ ಭಾಗದ ಜನರ ಜೀವನಾಡಿಯಾಗಿದ್ದು, ಹೆಚ್ಚು ನೀರು ಸಂಗ್ರಹವಾಗಬೇಕಿದೆ. ಈಗಾಗಲೆ ಅಧಿಕಾರಿಗಳ ಸಭೆ ನಡೆಸಿದ್ದು, ಹೂಳೆತ್ತುವುದು ಅಸಾಧ್ಯ ಎಂದಿದ್ದಾರೆ. ಆದರೆ ಮತ್ತೆ ಈ ಬಗ್ಗೆ ಸಭೆ ಕರೆದು ಚರ್ಚೆ ಮಾಡಬೇಕಿದೆ. ಈ ಕಾರ್ಯಕ್ಕೆ ಹಣದ ಅವಶ್ಯಕತೆ ಇದೆ ಎಂದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಪ್ರಮುಖರಾದ ಎಸ್.ದತ್ತಾತ್ರಿ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ ⇓
ಭದ್ರಾ ಡ್ಯಾಮ್ಗೆ ಭರಪೂರ ನೀರು, ಏರಿತು ತುಂಗಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು, ಎಷ್ಟಾಗಿದೆ?
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು














