ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 26 JULY 2024 : ಕಿರುತೆರೆ ನಟಿ ಶ್ವೇತಾ ಪ್ರಸಾದ್ ನೇತೃತ್ವದಲ್ಲಿ ಕಾಡು ಸಸಿ ನೆಡಲಾಯಿತು. ಆ ಸುದ್ದಿಯ ಸಂಪೂರ್ಣ ವಿವರ ಇಲ್ಲಿದೆ.
ಸೂಡೂರು ಕಿರುತೆರೆ ನಟಿ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮ
ಶಿವಮೊಗ್ಗ ಲೈವ್.ಕಾಂ : ಶಿವಮೊಗ್ಗ ತಾಲೂಕು ಸೂಡೂರು ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಕಿರುತೆರೆ ನಟಿ ಶ್ವೇತಾ ಪ್ರಸಾದ್ ನೇತೃತ್ವದಲ್ಲಿ ವಿವಿಧ ಸಸಿ (Sapling) ನಡೆಲಾಯಿತು. ಪ್ರಸಾದ್ ಫೌಂಡೇಷನ್ ಮತ್ತು ಅರಣ್ಯ ಇಲಾಖೆ ಸಹಯೋಗದೊಂದಿಗೆ ಫೌಂಡೇಷನ್ ಸ್ವಯಂ ಸೇವಕರು, ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿ ಸಸಿಗಳನ್ನು ನೆಟ್ಟರು. ಬಳಿಕ ಮಾತನಾಡಿದ ನಟಿ ಶ್ವೇತಾ ಪ್ರಸಾದ್, ‘ಅರಣ್ಯದಲ್ಲಿ ಕಾಡು ಪ್ರಾಣಿಗಳ ಅನುಕೂಲಕ್ಕೆ ಹಲಸು, ಮಾವು, ನೇರಳೆ ಹಣ್ಣಿನ ಸಸಿಗಳನ್ನು ತಂದ್ದಿದ್ದೆವು. ಅರಣ್ಯ ಇಲಾಖೆಯವರು ಸೂಚಿಸಿದ ಸ್ಥಳದಲ್ಲಿ ಸಸಿಗಳನ್ನು ನೆಟ್ಟಿದ್ದೇವೆʼ ಎಂದು ತಿಳಿಸಿದರು.
ಕೋಹಳ್ಳಿ ಸಂತೆ ಮೈದಾನದಲ್ಲಿ ಮೊಬೈಲ್ ಕಳ್ಳತನ
ಶಿವಮೊಗ್ಗ ಲೈವ್.ಕಾಂ : ತರಕಾರಿ ತರಲು ಸಂತೆ ಮೈದಾನಕ್ಕೆ ಹೋಗಿದ್ದ ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಕಳುವಾಗಿದೆ. ಶಿವಮೊಗ್ಗ ತಾಲೂಕು ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಘಟನೆ ಸಂಭವಿಸಿದೆ. ಆಯನೂರು ಕೋಹಳ್ಳಿಯ ಮಲ್ಲೇಶ್ ತಮ್ಮ ಶರ್ಟ್ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡಿದ್ದರು. ಅವರಿಗೆ ಗೊತ್ತಾಗದ ಹಾಗೆ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಯನೂರು ಆಸ್ಪತ್ರೆ ಎದುರು ಬಾಲಕನಿಗೆ ಬೈಕ್ ಡಿಕ್ಕಿ
ಶಿವಮೊಗ್ಗ ಲೈವ್.ಕಾಂ : ಆಯನೂರು ಆಸ್ಪತ್ರೆ ಎದುರು ರಸ್ತೆ ದಾಟುತ್ತಿದ್ದ ಸಂದರ್ಭ ಬಾಲಕನಿಗೆ ಬೈಕ್ ಡಿಕ್ಕಿಯಾಗಿ ಬಲಗಾಲಿಗೆ ಬಲವಾದ ಪೆಟ್ಟು ಬಿದ್ದಿದೆ. ಮೊಹಮ್ಮದ್ ಅಲಿ (4) ಗಾಯಗೊಂಡಿದ್ದಾನೆ. ತನ್ನ ಅಜ್ಜಿಯೊಂದಿಗೆ ಆಯನೂರು ಆಸ್ಪತ್ರೆಗೆ ಹೋಗಲು ಶಿವಮೊಗ್ಗ – ಸಾಗರ ರಸ್ತೆ ದಾಟುತ್ತಿದ್ದಾಗ ಘಟನೆ ಸಂಭವಿಸಿದೆ. ಸಾಗರ ಕಡೆಯಿಂದ ವೇಗವಾಗಿ ಬಂದ ಬೈಕ್ ಮೊಹಮ್ಮದ್ ಅಲಿಗೆ ಡಿಕ್ಕಿ ಹಡೆದಿದೆ. ಬಾಲಕನಿಗೆ ಆಯನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇓
ತೀರ್ಥಹಳ್ಳಿಯಲ್ಲಿ ಅತಿ ಹೆಚ್ಚು, ಶಿವಮೊಗ್ಗ, ಭದ್ರಾವತಿಯಲ್ಲಿ ಕಡಿಮೆ ಮಳೆ, ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





