ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 26 JULY 2024 : ಅರಸಾಳು ಬಳಿ ರೈಲ್ವೆ ಹಳಿಗೆ (Tree) ಅಡ್ಡಲಾಗಿ ಮರ ಬಿದ್ದಿರುವುದರಿಂದ ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್ಸಿಟಿ ರೈಲು ಅರಸಾಳು ನಿಲ್ದಾಣದಲ್ಲಿ ನಿಂತಿದೆ.
ಸೂಡೂರು ಬಳಿ ರೈಲು ಹಳಿಗೆ ಅಡ್ಡಲಾಗಿ ಮರ ಬಿದ್ದಿದೆ. ಕರೆಂಟ್ ವಯರ್ ತುಂಡಾಗಿ ರೈಲಿನ ಮೇಲೆ ಬಿದ್ದಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಇದರಿಂದ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ ಇಂಟರ್ಸಿಟಿ ರೈಲು, ರಾತ್ರಿ 7.47ಕ್ಕೆ ಶಿವಮೊಗ್ಗ ನಿಲ್ದಾಣದಿಂದ ಹೊರಟಿತ್ತು. ರಾತ್ರಿ 8.23ಕ್ಕೆ ಅರಸಾಳು ನಿಲ್ದಾಣದ ಬಳಿ ಇಂಟರ್ ಸಿಟಿ ರೈಲು ನಿಂತಿದೆ. ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಗೆ ಜು.27ರಂದು ಆರೆಂಜ್ ಅಲರ್ಟ್, 3 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





