ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 27 JULY 2024 : ತುಂಗಾ ಜಲಾಶಯದಿಂದ (Dam) ಅಪಾರ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿ ತೀರದ ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ಗಾಜನೂರಿನ ತುಂಗಾ ಜಲಾಶಯದಿಂದ ಪ್ರಸ್ತುತ 84,003 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ನದಿ ದಂಡೆ ಪಕ್ಕದ ಪ್ರದೇಶಗಳಿಗೆ ನೀರು ನುಗ್ಗಿದೆ.
ರಸ್ತೆ ಮೇಲೆ ಹರಿದ ತುಂಗೆ
ನ್ಯೂ ಮಂಡ್ಲಿ ಬಳಿ ತುಂಗಾ ನದಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಅಕ್ಕಪಕ್ಕದ ಜಮೀನು, ದೇವಸ್ಥಾನ ಜಲಾವೃತವಾಗಿದೆ. ರಸ್ತೆ ಮೇಲೆ ನೀರು ನಿಂತಿರುವುದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ.

ಜನರಲ್ಲಿ ನೆರೆ ಭೀತಿ
ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಳವಾಗುತ್ತಿದ್ದಂತೆ ನದಿ ದಂಡೆ ಮೇಲಿನ ಮನೆಗಳು, ಕಟ್ಟಡಗಳ ನಿವಾಸಿಗಳಲ್ಲಿ ಭೀತಿ ಉಂಟಾಗಿದೆ. ಹೊಸಹಳ್ಳಿ, ಸವಾಯಿಪಾಳ್ಯ, ಮದಾರಿಪಾಳ್ಯ, ನ್ಯೂ ಮಂಡ್ಲಿ, ಸೀಗೆಹಟ್ಟಿ ಭಾಗದಲ್ಲಿ ನೀರು ನುಗ್ಗುವ ಭಯ ಆವರಿಸಿದೆ. ಮದಾರಿ ಪಾಳ್ಯದಲ್ಲಿ ಮಸೀದಿಯ ಹಿಂಭಾಗದಲ್ಲಿ ಈಗಾಗಲೇ ಶೌಚಾಲಯ ಕೊಚ್ಚಿ ಹೋಗಿದ್ದು ಮತ್ತಷ್ಟು ಮಣ್ಣು ಕುಸಿಯುವ ಆತಂಕವಿದೆ.





ಇದನ್ನೂ ಓದಿ ⇓
ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಹೊರಕ್ಕೆ, ಭರ್ತಿಯ ಸನಿಹಕ್ಕೆ ಭದ್ರಾ, ಲಿಂಗನಮಕ್ಕಿ, ಎಷ್ಟಿದೆ ಒಳ ಹರಿವು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು


ಇದನ್ನೂ ಓದಿ ⇓



