ತೀರ್ಥಹಳ್ಳಿಯಲ್ಲಿ ಎಡೆಬಿಡದೆ ಮಳೆ, ಅಪಾಯದ ಮಟ್ಟದಲ್ಲಿ ತುಂಗೆ, ಶಾಲೆ, ಕಾಲೇಜಿಗೆ ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

THIRTHAHALLI, 30 JULY 2024 : ತೀರ್ಥಹಳ್ಳಿ ತಾಲೂಕಿನಾದ್ಯಂತ ಇವತ್ತು ಮಳೆ ಅಬ್ಬರಿಸುತ್ತಿದೆ (Heavy Rain). ತುಂಗಾ ನದಿ ನೀರಿನ ಮಟ್ಟ ಹೆಚ್ಚಳವಾಗಿದೆ. ಇನ್ನೊಂದೆಡೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜಗಳಿಗೆ ರಜೆ ಘೋಷಿಸಲಾಗಿದೆ.

ತಾಲೂಕಿನಾದ್ಯಂತ ಮಳೆ ಅಬ್ಬರ

ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಬಿರುಸಾಗಿದೆ. ಬೆಳಗ್ಗೆಯಿಂದ ಎಡೆಬಿಡದೆ ಮಳೆಯಾಗುತ್ತಿದೆ. ಸದ್ಯ ಹೊನ್ನೇತಾಳು, ಬಿದರಗೋಡು ಸೇರಿದಂತೆ ಆಗುಂಬೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ತೂದರು, ಭಾಂಡ್ಯ ಕುಕ್ಕೆ, ತ್ರಯಂಬಕಪುರ, ದೇಮ್ಲಾಪುರ, ಆರಗ, ಹೆಗ್ಗೋಡು ಸೇರಿದಂತೆ ವಿವಿಧೆಡೆ ಜೋರು ಮಳೆಯಾಗುತ್ತಿರುವ ವರದಿಯಾಗಿದೆ.

Thirthahalli-tunga-river-heavy-rain

ರಾಮ ಮಂಟಪದ ಮೇಲೆ ನೀರು

ಶೃಂಗೇರಿ, ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರಸಿದ್ಧ ರಾಮ ಮಂಟಪ ಮುಳುಗಿದೆ. ಮಂಟಪದ ಮೇಲೆ ಎರಡ್ಮೂರು ಅಡಿಗಿಂತಲೂ ಹೆಚ್ಚು ನೀರು ಹರಿಯುತ್ತಿದೆ ಎನ್ನಲಾಗುತ್ತಿದೆ.

Tunga river rama mantapa Thirthahalli

ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ತುಂಗಾ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ತಾಲೂಕಿನಾದ್ಯಂತ ನದಿ ಪಾತ್ರದ ಜನರಲ್ಲಿ ಭಯ ಆವರಿಸಿದೆ. ತಗ್ಗು ಪ್ರದೇಶದ ನಿವಾಸಿಗಳಲ್ಲಿಯು ಆತಂಕ ಮೂಡಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜು.31ರಂದು ತೀರ್ಥಹಳ್ಳಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್‌ ಆದೇಶಿಸಿದ್ದಾರೆ.

ಇದನ್ನೂ ಓದಿ ⇓

ತುಂಗಾ, ಭದ್ರಾ ಜಲಾಶಯಗಳ ಒಳ, ಹೊರ ಹರಿವು ಏರಿಕೆ, ನದಿ ಪಾತ್ರದಲ್ಲಿ ಜನರಲ್ಲಿ ಭೀತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment