ಶಿವಮೊಗ್ಗದಲ್ಲಿ ಶೆಡ್‌ ಬಳಿ‌ ಪೊಲೀಸ್‌ ದಾಳಿ, ಯುವಕ ಅರೆಸ್ಟ್‌ | ಇಡ್ಲಿ ತಿಂದು ತಿರುಗುವಷ್ಟರಲ್ಲಿ ಬೈಕ್‌ ಇಲ್ಲ – 3 ಫಟಾಫಟ್‌ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIMOGA, 1 AUGUST 2024 : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ (arrest). ಆತನ ಬಳಿ ಐದು ಸಾವಿರ ರೂ. ಮೌಲ್ಯದ ಗಾಂಜಾ ಮತ್ತು 300 ರೂ. ನಗದು ವಶಕ್ಕೆ ಪಡೆಯಲಾಗಿದೆ.

FATAFAT-1-NEW.webpಶೆಡ್‌ ಬಳಿ ಯುವಕ ಅರೆಸ್ಟ್‌

ಶಿವಮೊಗ್ಗ ಲೈವ್.ಕಾಂ : ಕೆಎಸ್‌ಅರ್‌ಟಿಸಿ ಬಸ್‌ ಡಿಪೋದ ಬಳಿ ಶೆಡ್‌ ಒಂದರ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಸಾಗರ ಮೂಲದ ಇಮ್ರಾನ್‌ ಅಲಿಯಸ್‌ ಕರಿಯನನ್ನು ಬಂಧಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

FATAFAT-2-NEW.webpಹೆಲ್ತ್‌ ಇನ್ಸ್‌ಪೆಕ್ಟರ್‌ ಬೈಕ್‌ ಕಳ್ಳತನ

ಶಿವಮೊಗ್ಗ ಲೈವ್.ಕಾಂ : ಆರೋಗ್ಯ ಇಲಾಖೆಯ ಹೆಲ್ತ್‌ ಇನ್ಸ್‌ಪೆಕ್ಟರ್‌ ಸಂದೀಪ್‌ ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿದೆ. ಶಿವಮೊಗ್ಗದ ಹೊಸಮನೆ 2ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಜು.24ರಂದು ಬೆಳಗ್ಗೆ ಸಂದೀಪ್‌ ಅವರು ಮನೆಯಿಂದ ಹೊರಬಂದು ನೋಡಿದಾಗ ಸಿಟಿ 100 ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಿದ ಸಂದೀಪ್‌ ಅವರು ಬಳಿಕ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

FATAFAT-3-NEW.webpಇಡ್ಲಿ ತಿಂದು ತಿರುಗುವಷ್ಟರಲ್ಲಿ ಬೈಕ್‌ ಇಲ್ಲ

ಶಿವಮೊಗ್ಗ ಲೈವ್.ಕಾಂ : ವಿನಾಯಕ ಟಾಕೀಸ್‌ ಬಳಿ ಇಡ್ಲಿ ಗಾಡಿಯಲ್ಲಿ ಇಡ್ಲಿ ಸೇವಿಸಿ, ಪಾರ್ಸೆಲ್‌ ಖರೀದಿಸಿ ಹಿಂದಕ್ಕೆ ತಿರುಗುವಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ. ಮಿಳಘಟ್ಟದ ಸರ್ದಾರ್‌ ಬೇಗ್‌ ಎಂಬುವವರಿಗೆ ಸೇರಿದ ಹೋಂಡಾ ಆಕ್ಟೀವಾ ಕಳುವಾಗಿದೆ. ಜು.12ರಂದು ಸಂಜೆ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ ⇓

ನಮ್ಮೂರ ಹೆಮ್ಮೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಹೆಸರು ನೋಂದಣಿಗೆ ಮನವಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 1, 2024

Acting Registrar Appointed for Kuvempu University

Acting Registrar Appointed for Kuvempu University

ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವ

ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಸಚಿವ

ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?

ಭದ್ರಾವತಿಯ ಇಬ್ಬರಿಗೆ 10 ವರ್ಷ ಜೈಲು, ₹2.23 ಲಕ್ಷ ದಂಡ, ಕಾರಣವೇನು?

ಇಂದಿನ ಪಂಚಾಂಗ, ಶುಭ ಸಮಯ ಯಾವಾಗಿದೆ?

ಇಂದಿನ ಪಂಚಾಂಗ, ಶುಭ ಸಮಯ ಯಾವಾಗಿದೆ?

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

Leave a Comment