ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOSANAGARA, 1 AUGUST 2024 : ಚಕ್ರಾ, ಸಾವೇಹಕ್ಲು ಜಲಾಶಯಗಳಿಗೆ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಬಾಗಿನ (Bagina) ಅರ್ಪಿಸಿದರು. ನಾಲ್ಕು ದಶಕದಲ್ಲಿ ಇದೇ ಮೊದಲ ಬಾರಿ ಇವರೆಡು ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗಿದೆ.
ಯಾರೆಲ್ಲ ಏನೇನು ಹೇಳಿದರು?
ಈ ಅವಳಿ ಜಲಾಶಯ ಪ್ರದೇಶ ಪ್ರವಾಸೋಧ್ಯಮಕ್ಕೆ ಹೇಳಿ ಮಾಡಿಸಿದ ಜಾಗ. ಜನರು ಜಾಗವನ್ನು ಆಸ್ವಾಧಿಸಲು ಅವಕಾಶ ಮಾಡಿಕೊಡಬೇಕಿದೆ. ಅದರಲ್ಲು ನೀರು ತುಂಬಿ ಸುಭೀಕ್ಷೆ ಹೊರಸೂಸುವ ಹೊತ್ತಲ್ಲಿ ಈ ಪ್ರದೇಶ ಎಲ್ಲರ ಕಣ್ಮನ ಸೆಳೆಯುತ್ತದೆ. ಇದರ ಸಂರಕ್ಷಣೆ ಜೊತೆಗೆ ಅಭಿವೃದ್ಧಿ ಕೂಡ ಅಗತ್ಯವಾಗಿದೆ. ಆರಗ ಜ್ಞಾನೇಂದ್ರ, ಶಾಸಕ

ಜಲಾಶಯ ಪ್ರದೇಶ ಅದ್ಭುತವಾಗಿದೆ. ಎಲ್ಲೆಲ್ಲೂ ನೀರು ಕಾಣುತ್ತಿದೆ. ಮಲೆನಾಡಿಗೆ ಈ ನೀರು ಶಾಪವೂ ಹೌದು. ಆದರೆ ದೇಶದ ಪ್ರಾಕೃತಿಕ ಸಂಪನ್ಮೂಲದ ದೃಷ್ಟಿಯಿಂದ ವರವೂ ಹೌದು. ಸುಂದರವಾದ ಪ್ರದೇಶ. ಇದು ಸದಾ ಲವಲವಿಕೆಯಿಂದ ಇರಬೇಕು. ಇದನ್ನು ಬಳಸಿಕೊಂಡು ಪ್ರವಾಸೋಧ್ಯಮ ಜೊತೆಗೆ ಉದ್ಯೋಗ ಸೃಷ್ಟಿ ಆಗುವಂತ ಯೋಜನೆಗಳು ರೂಪಿಸಬೇಕಾಗಿದೆ. ಹರತಾಳು ಹಾಲಪ್ಪ, ಮಾಜಿ ಸಚಿವ
ಹುಡುಗನಾಗಿದ್ದಾಗ ಅನೇಕ ಬಾರಿ ಜಲಾಶಯಕ್ಕೆ ಬಂದಿದ್ದೇನೆ. ಇದು ಅದ್ಭುತ ಪ್ರವಾಸಿ ತಾಣ. ಪ್ರಕೃತಿಯೊಂದಿಗೆ ಬದುಕಿ ಪ್ರಕೃತಿಯನ್ನು ಆರಾಧಿಸಬೇಕು. ಪ್ರವಾಸಿ ಸ್ಥಳವಾಗಿ ಆದ್ಯತೆ ನೀಡಬೇಕಿದೆ. ಎಸ್.ಎನ್.ಚನ್ನಬಸಪ್ಪ, ಶಾಸಕ
ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಡಾ. ಧನಂಜಯ ಸರ್ಜಿ, ತಹಶೀಲ್ದಾರ್ ರಶ್ಮೀ ಹಾಲೇಶ್, ವಾರಾಹಿ ಯೋಜನೆ ಕಾಮಗಾರಿ ವಿಭಾಗದ ಪ್ರಭಾರ ಅಧೀಕ್ಷಕ ಎಂಜಿನಿಯರ್ ಪ್ರಕಾಶ ಬ್ರಹ್ಮಾವರ್, ವಿದ್ಯುತ್ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಹೇಶ್ ಬಿ.ಸಿ, ಕಾಮಗಾರಿ ವಿಭಾಗದ ಎಇಇ ಸುದೀಪ್, ಭದ್ರತಾ ಅಧಿಕಾರಿ ಸದಾಶಿವ, ಕರಿಮನೆ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ ⇓
ನಮ್ಮೂರ ಹೆಮ್ಮೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಹೆಸರು ನೋಂದಣಿಗೆ ಮನವಿ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





