ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 1 AUGUST 2024 : ಅತಿ ವೇಗ, ಅಡ್ಡಾದಿಡ್ಡಿ ವಾಹನ ಚಾಲನೆ, ಕ್ರಮಬದ್ಧವಲ್ಲದ ನಂಬರ್ ಪ್ಲೇಟ್ ಬಳಕೆ ಸೇರಿದಂತೆ ಸಂಚಾರ ನಿಮಯ ಉಲ್ಲಂಘಿಸುವವರ ವಿರುದ್ಧ ಇವತ್ತಿನಿಂದ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ (FINE) ಕೈಗೊಳ್ಳಲು ತೀರ್ಮಾನಿಸಿದ್ದಾರೆ.
ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಆ.1ರಿಂದ ಜಿಲ್ಲೆಯಾದ್ಯಂತ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಬಿಎನ್ಎಸ್ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗುತ್ತದೆ. ಶಿವಮೊಗ್ಗ ನಗರದ ವಿವಿಧೆಡೆ ಕ್ಯಾಮರಾಗಳಿವೆ. ಇವುಗಳ ಮೂಲಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಅತಿ ವೇಗದ ವಾಹನ ಚಾಲನೆ, ಕ್ರಮಬದ್ಧವಲ್ಲದ ನಂಬರ್ ಪ್ಲೇಟ್ ಬಳಕೆ, ಫುಟ್ ಪಾತ್ ಮೇಲೆ ವಾಹನ ಚಾಲನೆ ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.
ಇದನ್ನೂ ಓದಿ ⇓
ಹೊಳೆಹೊನ್ನೂರಿನಲ್ಲಿ ಮನೆಗಳು ಜಲಾವೃತ, ಮಂಗೋಟೆ ಬಳಿ ರಸ್ತೆ ಮೇಲೆ ಹರಿದ ನೀರು, ಎಲ್ಲೆಲ್ಲಿ ಏನೇನಾಗಿದೆ?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















