ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI, 5 AUGUST 2024 : ಬ್ಯಾಂಕಿನ ಬಾಗಿಲಿನ ಬೀಗ ಮುರಿದು ಲಾಕರ್ (Locker) ಕಟ್ ಮಾಡಿ ತೆರೆಯಲು ವಿಫಲ ಯತ್ನವಾಗಿದೆ. ಲಾಕರ್ ಓಪನ್ ಆಗದ ಹಿನ್ನೆಲೆ ಸಿಸಿಟಿವಿ ಡಿವಿಆರ್ ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ ಉಪಕರಣ ಕಳವು ಮಾಡಲಾಗಿದೆ.
ಭದ್ರಾವತಿ ತಾಲೂಕು ನಾಗತಿಬೆಳಗಲು ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಕಳ್ಳತನ ಯತ್ನ ನಡೆದಿದೆ. ಆಗಸ್ಟ್ 2ರ ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಕೆಲಸಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಆಯುಧದಿಂದ ಬ್ಯಾಂಕಿನ ಶಟರ್ ಮುರಿದು ಒಳ ನುಗ್ಗಿರುವ ಕಳ್ಳರು ಹಣ, ಬಂಗಾರ, ಡಿಮಾಂಡ್ ಡ್ರಾಫ್ಟ್ಗಳನ್ನು ಇಟ್ಟಿದ್ದ ಲಾಕರ್ ಮುರಿಯಲು ಯತ್ನಿಸಿದ್ದಾರೆ. ಲಾಕರ್ ಕಟ್ ಮಾಡಲು ಗ್ಯಾಸ್ ಕಟರ್ ಬಳಕೆ ಮಾಡಿದ್ದಾರೆ. ಆದರೆ ಲಾಕರ್ ಓಪನ್ ಆಗದ ಹಿನ್ನೆಲೆ ಅದನ್ನು ಹಾಗೆ ಬಿಟ್ಟು ತೆರಳಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಲಾಕರ್ ಕಟ್ ಮಾಡಲು ಗ್ಯಾಸ್ ಕಟರ್

ಎಲೆಕ್ಟ್ರಾನಿಕ್ ಉಪಕರಣ ಕದ್ದೊಯ್ದರು
ಖದೀಮರು ಬ್ಯಾಂಕಿನ 3 ಸಿಸಿ ಕ್ಯಾಮರಾ, ಡಿವಿಆರ್, ರೋಟರ್, ಲ್ಯಾನ್ ನೆಟ್ವರ್ಕ್ ಮ್ಯಾನೇಜ್ಮೆಂಟ್ ಸ್ವಿಚ್, ಬಿಎಸ್ಎನ್ಎಲ್ ಮೀಡಿಯಾ ಕನ್ವರ್ಟರ್ ಕಳವು ಮಾಡಿದ್ದಾರೆ. ಇವುಗಳ ಅಂದಾಜು ಮೌಲ್ಯ 1.20 ಲಕ್ಷ ರೂ. ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಬೆನ್ನಿಗೆ ಲಾಕರ್ನಲ್ಲಿದ್ದ ನಗದು, ಬಂಗಾರ, ಡಿಮಾಂಡ್ ಡ್ರಾಫ್ಟ್ಗಳನ್ನು ಮತ್ತೊಂದು ಎಸ್ಬಿಐ ಬ್ಯಾಂಕಿಗೆ ವರ್ಗಾಯಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಬಿದರೆವರೆಗೆ ಕಾರು ಬೆನ್ನಟ್ಟಿ ಹೋಗಿ ಯುವಕರಿಂದ ಚಾಲಕನಿಗೆ ಮನಸೋಯಿಚ್ಛೆ ಥಳಿತ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






