BHADRAVATHI, 5 AUGUST 2024 : ಬ್ಯಾಂಕಿನ ಬಾಗಿಲಿನ ಬೀಗ ಮುರಿದು ಲಾಕರ್ (Locker) ಕಟ್ ಮಾಡಿ ತೆರೆಯಲು ವಿಫಲ ಯತ್ನವಾಗಿದೆ. ಲಾಕರ್ ಓಪನ್ ಆಗದ ಹಿನ್ನೆಲೆ ಸಿಸಿಟಿವಿ ಡಿವಿಆರ್ ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ ಉಪಕರಣ ಕಳವು ಮಾಡಲಾಗಿದೆ.
ಭದ್ರಾವತಿ ತಾಲೂಕು ನಾಗತಿಬೆಳಗಲು ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಕಳ್ಳತನ ಯತ್ನ ನಡೆದಿದೆ. ಆಗಸ್ಟ್ 2ರ ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಕೆಲಸಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಆಯುಧದಿಂದ ಬ್ಯಾಂಕಿನ ಶಟರ್ ಮುರಿದು ಒಳ ನುಗ್ಗಿರುವ ಕಳ್ಳರು ಹಣ, ಬಂಗಾರ, ಡಿಮಾಂಡ್ ಡ್ರಾಫ್ಟ್ಗಳನ್ನು ಇಟ್ಟಿದ್ದ ಲಾಕರ್ ಮುರಿಯಲು ಯತ್ನಿಸಿದ್ದಾರೆ. ಲಾಕರ್ ಕಟ್ ಮಾಡಲು ಗ್ಯಾಸ್ ಕಟರ್ ಬಳಕೆ ಮಾಡಿದ್ದಾರೆ. ಆದರೆ ಲಾಕರ್ ಓಪನ್ ಆಗದ ಹಿನ್ನೆಲೆ ಅದನ್ನು ಹಾಗೆ ಬಿಟ್ಟು ತೆರಳಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಲಾಕರ್ ಕಟ್ ಮಾಡಲು ಗ್ಯಾಸ್ ಕಟರ್
ಎಲೆಕ್ಟ್ರಾನಿಕ್ ಉಪಕರಣ ಕದ್ದೊಯ್ದರು
ಖದೀಮರು ಬ್ಯಾಂಕಿನ 3 ಸಿಸಿ ಕ್ಯಾಮರಾ, ಡಿವಿಆರ್, ರೋಟರ್, ಲ್ಯಾನ್ ನೆಟ್ವರ್ಕ್ ಮ್ಯಾನೇಜ್ಮೆಂಟ್ ಸ್ವಿಚ್, ಬಿಎಸ್ಎನ್ಎಲ್ ಮೀಡಿಯಾ ಕನ್ವರ್ಟರ್ ಕಳವು ಮಾಡಿದ್ದಾರೆ. ಇವುಗಳ ಅಂದಾಜು ಮೌಲ್ಯ 1.20 ಲಕ್ಷ ರೂ. ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಬೆನ್ನಿಗೆ ಲಾಕರ್ನಲ್ಲಿದ್ದ ನಗದು, ಬಂಗಾರ, ಡಿಮಾಂಡ್ ಡ್ರಾಫ್ಟ್ಗಳನ್ನು ಮತ್ತೊಂದು ಎಸ್ಬಿಐ ಬ್ಯಾಂಕಿಗೆ ವರ್ಗಾಯಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಬಿದರೆವರೆಗೆ ಕಾರು ಬೆನ್ನಟ್ಟಿ ಹೋಗಿ ಯುವಕರಿಂದ ಚಾಲಕನಿಗೆ ಮನಸೋಯಿಚ್ಛೆ ಥಳಿತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200