SHIMOGA, 6 AUGUST 2024 : ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಹಣ ಪಡೆದು ಹಿಂತಿರುಗಿಸದ ಹಿನ್ನೆಲೆ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ಶರತ್ ಕಲ್ಯಾಣಿ ವಿರುದ್ಧ ಮಹಿಳೆಯೊಬ್ಬರು ದೂರು (Arrest) ನೀಡಿದ್ದರು. ಈ ಹಿನ್ನೆಲೆ ಶಿವಮೊಗ್ಗ ಪೊಲೀಸರು ವಿಜಯಪುರದಲ್ಲಿ ಶರತ್ ಕಲ್ಯಾಣಿಯನ್ನು ಬಂಧಿಸಿದ್ದಾರೆ.
ಮಹಿಳೆ ನೀಡಿದ ದೂರಿನಲ್ಲಿ ಏನಿದೆ?
‘ಫೇಸ್ಬುಕ್ನಲ್ಲಿ ಶರತ್ ಕಲ್ಯಾಣಿ ತನ್ನನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದು, ಹಣವನ್ನು ಕೂಡ ಪಡೆದಿದ್ದ. ಹಣ ಹಿಂತಿರುಗಿಸುವಂತೆ ಕೇಳಿದಾಗ ಸಂಪರ್ಕ ಬಿಟ್ಟಿದ್ದ. ಹಾಗಾಗಿ ಶರತ್ ಕಲ್ಯಾಣಿಯ ಮನೆಗೆ ಹೋದಾಗ ಆತನಿಗೆ ಮದುವೆಯಾಗಿರುವುದು ಗೊತ್ತಾಯಿತು. ಈ ಸಂದರ್ಭ ತನ್ನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಒಡ್ಡಿದ್ದಾನೆ’ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು.
![]() |
ಪ್ರಕರಣ ದಾಖಲು ಮಾಡಿಕೊಂಡಿದ್ದ ಮಹಿಳಾ ಠಾಣೆ ಪೊಲೀಸರು ಶರತ್ ಕಲ್ಯಾಣಿಯನ್ನು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ.
ಇದನ್ನೂ ಓದಿ ⇓
ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರ್ ಬೆಂಕಿ, ಕ್ಷಣ ಹೊತ್ತಲ್ಲೇ ಧಗಧಗ ಹೊತ್ತಿ ಉರಿದ ವಾಯುವ್ಯ ಸಾರಿಗೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200