SHIMOGA, 10 AUGUST 2024 : ‘ಕಾರ್ಪೊರೇಟ್ ಕಂಪನಿಗಳೇ (Corporate) ದೇಶಬಿಟ್ಟು ತೊಲಗಿ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಪೊರೇಟ್ ಕಂಪನಿಗಳನ್ನು ಪ್ರತಿನಿಧಿಸುವ ಪ್ರತಿಕೃತಿಯನ್ನು ದಹಿಸಿ ಪ್ರತಿರೋಧ ವ್ಯಕ್ತಪಡಿಸಲಾಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ ⇒ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ, ಹೊಸನಗರದಲ್ಲಿ ಹೃದಯವಿದ್ರಾವಕ ಘಟನೆ
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿದ ದಿನವಾದ ಇಂದು ಕೃಷಿಯ ಮೇಲೆ ಕಾರ್ಪೊರೇಟ್ ಕಂಪನಿಗಳ ಹಿಡಿತದಿಂದ ಮುಕ್ತಿಯಾಗಿ ಆಕ್ರಮಣ ನಿಲ್ಲಬೇಕು. ರೈತರ ಬೆಳೆಗಳಿಗೆ ಎಂಎಸ್ಪಿ ಖಾತ್ರಿಯಾಗಬೇಕು. ರೈತರ ಹಾಗೂ ಜನಸಾಮಾನ್ಯರ ಬದುಕಿಗೆ ಕಂಟಕವಾಗಿರುವ ವಿದ್ಯುತ್ ಖಾಸಗೀಕರಣ ರದ್ದು ಮಾಡಬೇಕು. ಕಂಪನಿಗಳ ಹಿತ ಕಾಯಲು ತಂದಿರುವ ಕಾರ್ಮಿಕ ವಿರೋಧಿ ನಾಲ್ಕು ಕಾಯ್ದೆಗಳನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.

ಉದ್ಯೋಗ ಭದ್ರತೆ ದೇಶದ ನೀತಿಯಾಗಬೇಕು. ಹಿಂಬಾಗಿಲಿನಿಂದ ಬಂದು ಮೀಸಲಾತಿಯನ್ನು ಸರ್ವಾನಾಶಗೊಳಿಸುತ್ತಿರುವ ಕಾರ್ಪೊರೇಟ್ ಪರ ಖಾಸಗೀಕರಣ ನಿಂತು ಮೀಸಲಾತಿ ಜಾರಿಯಾಗಬೇಕು ಎಂದು ಆಗ್ರಹಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಪ್ರಮುಖರಾದ ಇ.ಬಿ.ಜಗದೀಶ್, ಕೆ.ರಾಘವೇಂದ್ರ, ಟಿ. ಎಂ.ಚಂದ್ರಪ್ಪ ಹಿಟ್ಟೂರು ರಾಜು, ಜಿ.ಎನ್. ಪಂಚಾಕ್ಷರಿ, ಜ್ಞಾನೇಶ್, ಸಿ.ಚಂದ್ರಪ್ಪ, ಗುರುಶಾಂತ ಇದ್ದರು.
ಇದನ್ನೂ ಓದಿ ⇒ ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





