ಪಿಕಪ್‌ ವಾಹನ, ಬೈಕ್‌ ನಡುವೆ ಅಪಘಾತ, ಕೇರಳ ಮೂಲದ ವ್ಯಕ್ತಿ ಸೇರಿ ಇಬ್ಬರು ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

THIRTHAHALLI, 13 AUGUST 2024 : ಪಿಕಪ್‌ ವಾಹನ ಮತ್ತು ಬೈಕ್‌ ನಡುವೆ ಅಪಘಾತ (Mishap) ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಬಿದರಗೋಡು ಬಳಿ ಅಗಸರಕೋಣೆಯಲ್ಲಿ ಘಟನೆ ಸಂಭವಿಸಿದೆ.

ಅಗಸರಕೋಣೆಯ ಶರತ್‌ ಮತ್ತು ಕೇರಳ ಮೂಲದ ಮನೋಜ್‌ ಮೃತರು. ಬೈಕ್‌ ತೀರ್ಥಹಳ್ಳಿ ಕಡೆಗೆ ತೆರಳುತ್ತಿತ್ತು. ಎದುರಿನಿಂದ ಬಂದ ಪಿಕಪ್‌ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್‌ನಲ್ಲಿದ್ದ ಶರತ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಆಗುಂಬೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನೆ ಬೆನ್ನಿಗೆ ಪಿಕಪ್‌ ವಾಹನದ ಚಾಲಕ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ.

bike-and-pickup-mishap-near-bidaragodu-in-thirthahalli

ಇದನ್ನೂ ಓದಿ ⇒ ಗಾಡಿಕೊಪ್ಪದಲ್ಲಿ ತಡರಾತ್ರಿ ಕಾರ್ಯಾಚರಣೆ, 28 ಕೆ.ಜಿ ತೂಕದ ಹೆಬ್ಬಾವು ರಕ್ಷಣೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment