ಆಗುಂಬೆಯಲ್ಲಿ ಮದ್ಯದಂಗಡಿ ತೆರೆಯಲು ಗ್ರಾಮಸ್ಥರ ವಿರೋಧ, ವಾತಾವರಣ ಹಾಳುಗೆಡವದಂತೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 16 ಜುಲೈ 2019

ಪ್ರಕೃತಿ ಸೌಂದರ್ಯ, ಸೂರ್ಯಾಸ್ತಮಾನ ವೀಕ್ಷಣೆಗೆ ಪ್ರಖ್ಯಾತಿ ಪಡೆದಿರುವ ಆಗುಂಬೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬಾರದು ಎಂದು ಆಗ್ರಹಿಸಿ, ಗ್ರಾಮಸ್ಥರು ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.

ಆಗುಂಬೆಯಲ್ಲಿ ಅಭಯಾರಣ್ಯ, ನಕ್ಸಲ್ ಬಾಧಿತ ಪ್ರದೇಶವೆಂಬ ಕಾರಣಕ್ಕೆ ನಲುಗಿ ಹೋಗಿದ್ದೇವೆ. ಈಗ ಮದ್ಯದಂಗಡಿ ತೆರೆದರೆ ಮತ್ತಷ್ಟು ಸಮಸ್ಯೆಗಳು ಉದ್ಭವವಾಗಲಿದೆ. ಸದ್ಯ ಇಲ್ಲಿಗೆ ದೇಶ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಾರೆ. ಪ್ರಕೃತಿ ಸೌಂದರ್ಯ ಸವಿಯಲು ಪ್ರಶಸ್ತ ಸ್ಥಳವಾಗಿದೆ. ಉದ್ದೇಶಿತ ಮದ್ಯದಂಗಡಿ ತೆರೆದರೆ, ಇಡೀ ವಾತಾವರಣ ಹಾಳಾಗಲಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈಗ ಸ್ಥಾಪಿಸಲು ಹೊರಟಿರುವ ಮದ್ಯದಂಗಡಿಯು ಬಸ್ ನಿಲ್ದಾಣ ಮತ್ತು ಆಂಜನೇಯ ದೇವಸ್ಥಾನದ ಸಮೀಪದಲ್ಲಿದೆ. ಜನವಸತಿ ಪ್ರದೇಶವು ಆಗಿದೆ. ಈ ಸೂಕ್ಷ್ಮ ವಿಚಾರಗಳನ್ನು ಆಧಾರವಾಗಿ ಇಟ್ಟುಕೊಂಡು, ಇಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ಕೊಡಬಾರದು ಎಂದು ಆಗುಂಬೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment