ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಸುದ್ದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

GOOD MORNING NEWS, 22 AUGUST 2024

#fed740 - SHUBODAYA-SHIVAMOGGA

ಸಣ್ಣ ವಿಷಯಗಳನ್ನು ಆನಂದಿಸಲು ಪ್ರಾರಂಭಿಸಿ. ನಿಮ್ಮ ದಿನವು ಪ್ರಕಾಶಮಾನವಾಗಿರುತ್ತದೆ.


ಇದನ್ನೂ ಓದಿ ⇒ ದಿನ ಭವಿಷ್ಯ | 22 ಆಗಸ್ಟ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಶುಭ ಸಂಖ್ಯೆ ಎಷ್ಟು?

WEATHER-REPORT

ಶಿವಮೊಗ್ಗದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಧಗೆ ಹೆಚ್ಚಿದೆ. ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರತ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.


 SHIMOGA CITY NEWS 

#d4dcdcನೆಹರು ಕ್ರೀಡಾಂಗಣ : ಇಂದಿನಿಂದ ಭಾರತೀಯ ಸೇನೆಯ ಅಗ್ನಿವೀರ್‌ ನೇಮಕಾತಿ ಆರಂಭ. ಆ.31ರವರೆಗೆ 11 ಜಿಲ್ಲೆಯ ಅಭ್ಯರ್ಥಿಗಳ ನೇಮಕಾತಿ ರಾಲಿ ನಡೆಯಲಿದೆ.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಇದೇ ಮೊದಲು ಸೇನೆಗೆ ಅಗ್ನಿವೀರರ ನೇಮಕಾತಿ ರ‍್ಯಾಲಿ, ನಾಳೆಯಿಂದ ಆಯ್ಕೆ ಶುರು, ಹೇಗಿದೆ ಸಿದ್ಧತೆ?

#d4dcdcಬಿಜೆಪಿ ಕಚೇರಿ : ಪರಿಶಿಷ್ಟ ಜಾತಿ, ಪಂಗಡದ ಎಲ್ಲ ಅನುದಾನಗಳಿಗೆ ರಾಜ್ಯ ಸರ್ಕಾರ ಕತ್ತರಿ ಹಾಕಿದೆ. ಗ್ಯಾರಂಟಿ ಯೋಜನೆಗೆ ಆ ಅನುದಾನ ಬಳಕೆಯಾಗುತ್ತಿದೆ. ಮಾಜಿ ಸಚಿವ ಎನ್‌.ಮಹೇಶ್‌ ಆರೋಪ.

#d4dcdcಪತ್ರಿಕಾ ಭವನ : ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜ ಬಂಧಿಸಬೇಕು. ಮಾಜಿ ಸಚಿವ ಈಶ್ವರಪ್ಪ ಆಗ್ರಹ.

#d4dcdcಡಿಸಿ ಕಚೇರಿ : ಕೇರಳದ ವಯನಾಡ್‌ ಮಾದರಿ ಭೂಕುಸಿತ ತಪ್ಪಿಸಲು ಮಾಧವ್‌ ಗಾಡ್ಗೀಳ್‌ ವರದಿ ಜಾರಿಗೊಳಿಸಬೇಕು. ಪರಿಸರಕ್ಕಾಗಿ ನಾವು ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ.

#d4dcdcಪತ್ರಿಕಾ ಭವನ : ಶ್ರೀಗಂಧ ಸಂಸ್ಥೆ ವತಿಯಿಂದ ಆ.24ರಂದು ವಿನೋಬನಗರ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಚಾಲಕ ಕೃಷ್ಣಾನಂದ ತಿಳಿಸಿದರು.

#d4dcdcಜೆಎನ್‌ಎನ್‌ ಕಾಲೇಜು : ಅವರಣದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ. ಸೂಡಾ ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರಿಂದ ಗುದ್ದಲಿ ಪೂಜೆ.

#d4dcdcಪತ್ರಿಕಾ ಭವನ : ಕಾಗೋಡು ತಿಮ್ಮಪ್ಪ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು, ಯಡೆಹಳ್ಳಿಯಲ್ಲಿ ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ಮಾನವ ಹಕ್ಕುಗಳು ಹೋರಾಟ ಸಮಿತಿಯಿಂದ ಆ.27ರಂದು ಡಿಸಿ ಕಚೇರಿ ಮುಂದೆ ಪ್ರತಿಭಟನೆ.

#d4dcdcಕುರುಬರ ಸಂಘ : ಬಾಲರಾಜ್‌ ಅರಸ್‌ ರಸ್ತೆಯಲ್ಲಿ ಕುರುಬರ ಸಂಘದ ನೂತನ ಸಮುದಾಯ ಭವನ ಕಟ್ಟಡಕ್ಕೆ ಶಂಕುಸ್ಥಾಪನೆ.


 SHIMOGA | BHADRAVATHI | THIRTHAHALLI NEWS 

#d4dcdcಉಂಬ್ಳೆಬೈಲು : ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ನೊಟೀಸ್‌. ಎಂಎಡಿಬಿ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಭೇಟಿಯಾದ ರೈತರು.

#d4dcdcಆಯನೂರು : ಬೇಕರಿಯಲ್ಲಿ ಅಗ್ನಿ ಅವಘಡ. ಮೂರು ಬಾರಿ ಸ್ಪೋಟ. ಸುಟ್ಟು ಕರಕಲಾದ ವಸ್ತುಗಳು


#d4dcdcತೀರ್ಥಹಳ್ಳಿ : ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ. ಶಿಕ್ಷಕನ ಬಂಧನ. ಪೊಲೀಸ್‌ ಠಾಣೆಗೆ ಶಾಸಕ ಆರಗ ಜ್ಞಾನೇಂದ್ರ, ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಭೇಟಿ.

#d4dcdcತೀರ್ಥಹಳ್ಳಿ : ಪತ್ರಕರ್ತ ನಿರಂಜನ್‌ ಮೇಲೆ ಇನ್ಸ್‌ಪೆಕ್ಟರ್‌ ಅಶ್ವಥಗೌಡ ಹಲ್ಲೆ ಯತ್ನ. ಮೊಬೈಲ್‌ ಕಸಿದುಕೊಂಡ ಆರೋಪ. ಠಾಣೆ ಮುಂದೆ ಪತ್ರಕರ್ತರ ಧರಣಿ. ಪತ್ರಕರ್ತ ಸಂಘದಿಂದ ಘಟನೆಗೆ ಖಂಡನೆ.

#d4dcdcಹೊಳೆಹೊನ್ನೂರು : ಜಂಬರಗಟ್ಟ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಉಪ್ಪಾರ ಬೀದಿ ವಾಸಿ ಶಿಲ್ಪಿ ಹೆಚ್‌.ಎನ್.‌ಶರತ್‌ ಸಾವು.

#d4dcdcಹೊಳೆಹೊನ್ನೂರು : ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಕೆ.ರಂಗಸ್ವಾಮಿ ಭೇಟಿ, ಪರಿಶೀಲನೆ. ಸಿಬ್ಬಂದಿ ಕಾರ್ಯವೈಖರಿ ಕುರಿತ ಮಾಹಿತಿ ಸಂಗ್ರಹ.


 HOSANAGARA | SAGARA NEWS 

#d4dcdcಆನಂದಪುರ : ಸುತ್ತಮುತ್ತಲು ಭಾರಿ ಮಳೆ. ಮನೆಗಳು, ಮಳಿಗೆಗಳಿಗೆ ನುಗ್ಗಿದ ನೀರು. ಹೆದ್ದಾರಿ ಮೇಲೆ ಹರಿದ ಚರಂಡಿ ನೀರು.

#d4dcdcಸಾಗರ : ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆ ಅವೈಜ್ಞಾನಿಕ. ಹೋರಾಟಗಾರರಿಗೆ ಪಕ್ಷಾತೀತ ಬೆಂಬಲ. ಮಾಜಿ ಸಚಿವ ಹರತಾಳು ಹಾಲಪ್ಪ ಘೋಷಣೆ.

#d4dcdcಹೊಸನಗರ : ಸೆ.1ರಿಂದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ. ಅಥ್ಲೆಟಿಕ್ಸ್‌, ವಾಲಿಬಾಲ್‌, ಕಬಡ್ಡಿ, ಥ್ರೋಬಾಲ್‌, ಕೊಕ್ಕೊ ಪಂದ್ಯಾವಳಿ ಇರಲಿದೆ.

#d4dcdcಸಾಗರ : ಗಾಂಧಿ ಮೈದಾನದಲ್ಲಿ ಆ. 24ರಂದು ಚರಕ, ಜೀವನ್ಮುಖಿ ಸಂಸ್ಥೆಯಿಂದ ‘ಅವ್ವ’ ಮಹಿಳಾ ಮಹಾಸಂತೆ ನಡೆಯಲಿದೆ ಎಂದು ಆಯೋಜಕರಾದ ಎಂ.ವಿ.ಪ್ರತಿಭಾ ತಿಳಿಸಿದ್ದಾರೆ.

#d4dcdcಕಾರ್ಗಲ್‌ : ಆ.27ರಂದು ಜೋಗ – ಕಾರ್ಗಲ್‌ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಿಗದಿಯಾಗಿದೆ.

#d4dcdcಕಾರ್ಗಲ್‌ : ಬಿದರೂರು ಗ್ರಾಮದ ತಳಕಳಲೆ ಹಿನ್ನೀರು ಪಕ್ಕದ ಕರಿಚಾನಲ್‌ನಲ್ಲಿ ಮೊಸಳೆ ಪ್ರತ್ಯಕ್ಷ. ಕೂಡಲೆ ಮೊಸಳೆ ಸೆರೆ ಹಿಡಿಯುವಂತೆ ಗ್ರಾಮಸ್ಥರ ಆಗ್ರಹ.


 SORABA | SHIKARIPURA NEWS 

#d4dcdcಶಿಕಾರಿಪುರ : ಪುರಸಭೆ ನೂತನ ಅಧ್ಯಕ್ಷೆಯಾಗಿ ಬಿಜೆಪಿಯ ಶೈಲಾ, ಉಪಾಧ್ಯಕ್ಷೆಯಾಗಿ ಎಂ.ಎಸ್‌.ರೂಪಾ ಆಯ್ಕೆ. ಸಂಸದ ರಾಘವೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ ಅಭಿನಂದನೆ.

#d4dcdcಶಿರಾಳಕೊಪ್ಪ : ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಮಮತಾ ನಿಂಗಪ್ಪ, ಉಪಾಧ್ಯಕ್ಷರಾಗಿ ಮುದಾಸೀರ್‌ ಅಹಮ್ಮದ್‌ ಆಯ್ಕೆ. ಕಾಂಗ್ರೆಸ್‌ ಮುಖಂಡ ನಾಗರಾಜಗೌಡ ಅಭಿನಂದನೆ.

#d4dcdcಸೊರಬ : ಕೈಗಾರಿಕಾ ವಸಾಹತು ಸಮೀಪ ರೈತರ ಗದ್ದೆಯಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಾಟಿ ಸಂಭ್ರಮ. ಪ್ರಗತಿಪರ ರೈತರು ಸೇರಿದ ಹಲವರು ಭಾಗಿ.

#d4dcdcಆನವಟ್ಟಿ : ಕುರುಬರ ಓಣಿಯ ಪಿತ್ರಾರ್ಜಿತ ಆಸ್ತಿಯನ್ನು  ಅಧಿಕಾರಿಗಳು ಬೇನಾಮಿ ವ್ಯಕ್ತಿಯ ಹೆಸರಿಗೆ ಖಾತೆ ಬದಲಾವಣೆ ಮಾಡುತ್ತಿದ್ದಾರೆಂದು ಆರೋಪ. ಪಟ್ಟಣ ಪಂಚಾಯಿತಿ ಮುಂದೆ ಪ್ರತಿಭಟನೆ.

#d4dcdcಸೊರಬ : ಒಂದು ಗಂಟೆಗು ಹೆಚ್ಚು ಹೊತ್ತು ಸುರಿದ ಮಳೆ. ಪಟ್ಟಣದ ವಿವಿಧೆಡೆ ಚರಂಡಿಗಳು ಭರ್ತಿಯಾಗಿ ರಸ್ತೆ ಮೇಲೆ ಹರಿದ ನೀರು. ಕೆಲ ಹೊತ್ತು ಸಂಚಾರ ಅಸ್ತವ್ಯಸ್ತ.

ಇದನ್ನೂ ಓದಿ ⇒ ಮೆಗ್ಗಾನ್‌ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಬಳಿಕ ಮಹಿಳೆಗೆ ಬಂತು ಸಾಲು ಸಾಲು ಮೆಸೇಜ್‌, ಆಮೇಲೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 22, 2024

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment