ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
FATAFAT NEWS, 22 AUGUST 2024 | ಜಿಲ್ಲೆಯ ಮೂರು ಪ್ರಮುಖ ಸುದ್ದಿಗಳ ಫಟಾಫಟ್ ನ್ಯೂಸ್ ಅಪ್ಡೇಟ್
ದೋಷಾರೋಪ ಪಟ್ಟಿ ಸಲ್ಲಿಕೆ
ಶಿವಮೊಗ್ಗ ಲೈವ್.ಕಾಂ : ವಾಲ್ಮೀಕಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶಿವಮೊಗ್ಗ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. 300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ನಿಗಮದ ವ್ಯವಸ್ಥಾಪಕ ಜೆ.ಜಿ.ಪದ್ಮನಾಭ, ಲೆಕ್ಕಾಧೀಕ್ಷಕ ಪರಶುರಾಮ ದುರ್ಗಣ್ಣನವರ್ ಹೆಸರನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ. ನಿಗಮದ ಅಧಿಕಾರಿ ಚಂದ್ರಶೇಖರ್ 2024ರ ಮೇ ತಿಂಗಳಲ್ಲಿ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದನ್ನೂ ಓದಿ ⇒ ‘ರಕ್ತ ಕೊಟ್ಟೇವು, ನೀರು ಕೊಡುವುದಿಲ್ಲ’ ಅಂದವರು ಈಗ ಧ್ವನಿ ಎತ್ತಬೇಕು, ಮಾಜಿ ಮಿನಿಸ್ಟರ್ ಆಗ್ರಹ
MLA ಪುತ್ರನ ಹತ್ಯೆಗೆ ಸ್ಕೆಚ್, ಎಸ್ಪಿ ಪ್ರತಿಕ್ರಿಯೆ
ಶಿವಮೊಗ್ಗ ಲೈವ್.ಕಾಂ : ಶಾಸಕ ಬಿ.ಕೆ. ಸಂಗಮೇಶ್ವರ್ ಪುತ್ರ ಬಸವೇಶ್ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣ ಸಂಬಂಧ ಎಲ್ಲಾ ಆಯಾಮದಲ್ಲು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದರು. ಬಸವೇಶ್ ಹತ್ಯೆ ಮಾಡುವಂತೆ ಜೈಲಿನಿಂದ ಕರೆ ಬಂದಿದೆ ಎಂದು ಆರೋಪಿಸಲಾಗಿದೆ. ಯಾರಿಂದ ಕರೆ ಬಂದಿದೆ. ಯಾರು ಮಾತನಾಡಿದ್ದಾರೆ ಎಂಬುದು ಸೇರಿದಂತೆ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ ⇒ ಮೆಗ್ಗಾನ್ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಬಳಿಕ ಮಹಿಳೆಗೆ ಬಂತು ಸಾಲು ಸಾಲು ಮೆಸೇಜ್, ಆಮೇಲೆ ಕಾದಿತ್ತು ಶಾಕ್
ವಿದ್ಯುತ್ ಶಾಕ್ಗೆ ಯುವಕ ಬಲಿ
ಶಿವಮೊಗ್ಗ ಲೈವ್.ಕಾಂ : ಹೊಳೆಹೊನ್ನೂರು ಸಮೀಪದ ಜಂಬರಗಟ್ಟ ಗ್ರಾಮದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಪಟ್ಟಣದ ಉಪ್ಪಾರ ಬೀದಿ ವಾಸಿ ಶಿಲ್ಪಿ ಎಚ್.ಎನ್.ಶರತ್ (26) ಸಾವನ್ನಪ್ಪಿದ್ದಾರೆ. ಜಂಬರಗಟ್ಟ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ದ್ವಾರ ಬಾಗಿಲು ಕಾಮಗಾರಿ ನಡೆಯುತ್ತಿದೆ. ಅಲ್ಲಿ ವಿಗ್ರಹ ಕೆಲಸ ಮಾಡುವ ಸಂದರ್ಭ ವಿದ್ಯುತ್ ತಂತಿ ತಗುಲಿದೆ. ತೀವ್ರ ಅಸ್ವಸ್ಥನಾಗಿದ್ದ ಹೆಚ್.ಎನ್.ಶರತ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ ⇒ ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಲ್ಲಿ ಶಿಕ್ಷಕ ಅರೆಸ್ಟ್
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





