HOLEHONNURU, 25 AUGUST 2024 : ಕಳೆದ ಕೆಲವು ದಿನದಿಂದ ಆತಂಕ ಸೃಷ್ಟಿಸಿದ್ದ ಕರಡಿ (Bear) ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಟ್ಟೆಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇರಿಸಿದ್ದ ಬೋನಿಗೆ ಕಳೆದ ರಾತ್ರಿ ಕರಡಿ ಸೆರೆ ಸಿಕ್ಕಿದೆ. ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಚೌಡಮ್ಮ ದೇವಸ್ಥಾನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು. ರಾತ್ರಿ 2.45ಕ್ಕೆ ದೇಗುಲದ ಬಳಿ ಬಂದ ಕರಡಿ ಬೋನಿಗೆ ಬಿದ್ದಿದೆ. ಈ ದೃಶ್ಯ ದೇಗುಲದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ವಿಷಯ ತಿಳಿದು ದೊಡ್ಡ ಸಂಖ್ಯೆ ಜನರು ದೇಗುಲದ ಬಳಿ ಜಮಾಯಿಸಿದ್ದರು.

ಸುತ್ತಮುತ್ತಲ ಗ್ರಾಮದಲ್ಲಿ ಆತಂಕ ಮೂಡಿಸಿತ್ತು
ಕರಡಿ ಪ್ರತ್ಯಕ್ಷವಾಗಿದ್ದರಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಉಂಟಾಗಿತ್ತು. ಅಗಸನಹಳ್ಳಿ, ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ದಾಸರಕಲ್ಲಹಳ್ಳಿ, ತಿಮ್ಲಾಪುರ, ತಿಮ್ಲಾಪುರ ಕ್ಯಾಂಪ್, ಜಂಬರಘಟ್ಟೆ, ವಿಠಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರಡಿ ಕಾಣಿಸುತ್ತಿತ್ತು. ಜಮೀನು ಕೆಲಸಕ್ಕೆ ತೆರಳಲು ರೈತರು, ಕಾರ್ಮಿಕರು ಹಿಂದೇಟು ಹಾಕುತ್ತಿದ್ದರು. ರಾತ್ರಿ ವೇಳೆ ಒಬ್ಬಂಟಿಯಾಗಿ ಓಡಾಡಲು ಹೆದರುತ್ತಿದ್ದರು.

ಇದನ್ನೂ ಓದಿ ⇒ MLA ಪುತ್ರನ ಹತ್ಯೆಗೆ ಸ್ಕೆಚ್, ಎಸ್ಪಿ ಮೊದಲ ರಿಯಾಕ್ಷನ್ – 3 ಫಟಾಫಟ್ ನ್ಯೂಸ್
ವ್ಯಕ್ತಿ ಮೇಲೆ ದಾಳಿ ನಡೆಸಿತ್ತು
ಎಮ್ಮೆಹಟ್ಟಿ ಗ್ರಾಮದ ಆನಂದಪ್ಪ ಎಂಬುವರ ಮೇಲೆ ಕೆಲ ದಿನಗಳ ಹಿಂದೆ ಕರಡಿ ದಾಳಿ ನಡೆಸಿತ್ತು. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ಸಂದರ್ಭ ಏಕಾಏಕಿ ದಾಳಿಗೆ ಆನಂದಪ್ಪ ಗಾಯಗೊಂಡಿದ್ದರು. ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು. ದಾಳಿಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿತ್ತು.

ಇದನ್ನೂ ಓದಿ ⇒ ಶಿವಮೊಗ್ಗ ನಗರದ ಸಮೀಪ ಆನೆ ದಾಳಿಗೆ ವ್ಯಕ್ತಿ ಬಲಿ
ಗ್ರಾಮಸ್ಥರ ಆತಂಕದ ನಡುವೆ ಮಾವಿನಕಟ್ಟೆ ವಲಯ ಅರಣ್ಯ ಅಧಿಕಾರಿಗಳು ಕರಡಿಯ ಚಲನವಲನ ಗಮನಿಸಿ ಬೋನ್ ಇರಿಸಿದ್ದರು. ಆರ್ಎಫ್ಒ ಜಗದೀಶ ಮಾರ್ಗದರ್ಶನದಲ್ಲಿ ಬೋನ್ ಇರಿಸಿದ್ದು, ಇವತ್ತು ಕರಡಿ ಸೆರೆಯಾಗಿದೆ. ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊಂಡೊಯ್ದಿದ್ದಾರೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





