ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SORABA, 26 AUGUST 2024 : ತೋಟದಲ್ಲಿ ಅಡಿಕೆ (Areca) ಮರಗಳಿಗೆ ಔಷಧ ಸಿಂಪಡಿಸುವ ವೇಳೆ ವಿದ್ಯುತ್ ಪ್ರವಹಿಸಿ ರೈತ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೊರಬ ತಾಲೂಕು ಓಟೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಅಡಿಕೆ ಮರಗಳ ಹಿಂಗಾರಕ್ಕೆ ಕೊಳೆ ಔಷಧ ಸಿಂಪಡಿಸುವಾಗ ವಿದ್ಯುತ್ ತಂತಿಗೆ ಕೊಳೆ ಔಷಧ ತಗುಲಿದೆ. ಅದರಿಂದ ವಿದ್ಯುತ್ ಪ್ರವಹಿಸಿ ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ (35) ಮೃತಪಟ್ಟಿದ್ದಾರೆ.
ತಂದೆ ಮತ್ತು ಅಣ್ಣನ ಜತೆ ಭಾನುವಾರ ಓಟೂರು ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ ಔಷಧ ಸಿಂಪಡಿಸಲು ಹೋಗಿದ್ದರು. ತೋಟದ ಪಕ್ಕದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ. ಸಿಂಪಡಿಸುವ ಔಷಧ ತಂತಿಗೆ ತಗುಲಿದೆ. ಔಷಧ ಸಿಂಪಡಿಸುವ ಪೈಪ್ನಿಂದ ವಿದ್ಯುತ್ ಪಸರಿಸಿದ ಪರಿಣಾಮ ಶ್ರೀಕಾಂತ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲ್ಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ GOOD MORNING ಶಿವಮೊಗ್ಗ | 26 ಆಗಸ್ಟ್ 2024 | ಒಂದೇ ಕ್ಲಿಕ್ನಲ್ಲಿ ಜಿಲ್ಲೆಯ ಎಲ್ಲಾ ಸುದ್ದಿ
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





