ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
FATAFAT CRIME NEWS, 28 AUGUST 2024
ನಡುರಾತ್ರಿ ಸೇತುವೆಯಿಂದ ಕೆಳಗೆ ಹಾರಿದ ಕಾರು
ಶಿವಮೊಗ್ಗ ಲೈವ್.ಕಾಂ : ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗದ ತಮ್ಮೂರಿಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಗರದಹಳ್ಳಿ ಅಶೋಕನಗರದ ನಡುವೆ ಸೇತುವೆಯಿಂದ ಕೆಳಗೆ ಚಾನಲ್ಗೆ ಕಾರು ಹಾರಿದೆ. ಸೋಮವಾರ ರಾತ್ರಿ 2.30ರ ಹೊತ್ತಿಗೆ ಘಟನೆ ಸಂಭವಿಸಿದೆ. ಚಾಲಕ ಕಾರ್ತಿಕ್ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಪ್ರಣಪಾಯದಿಂದ ಪಾರಾಗಿದ್ದಾರೆ.
ಬಸ್ ಡಿಕಿ, ಎರಡು ಎಮ್ಮೆಗಳು ಸ್ಥಳದಲ್ಲೇ ಸಾವು
ಶಿವಮೊಗ್ಗ ಲೈವ್.ಕಾಂ : ಮಿನಿ ಬಸ್ ಡಿಕ್ಕಿಯಾಗಿ ಗರ್ಭ ಧರಿಸಿದ್ದ ಎರಡು ಎಮ್ಮೆಗಳು ಸಾವನ್ನಪ್ಪಿವೆ. ಮೂರು ಎಮ್ಮೆಗಳು ಗಾಯಗೊಂಡಿವೆ. ಈ ಪೈಕಿ ಒಂದು ಎಮ್ಮೆಯ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಜ್ಞಾನದೀಪ ಶಾಲೆ ಸಮೀಪ ಘಟನೆ ಸಂಭವಿಸಿದೆ. ಚಂದ್ರಶೇಖರ್ ಮತ್ತು ಗೋಪಾಲ್ ಎಂಬುವವರಿಗೆ ಸೇರಿದ ಎಮ್ಮೆಗಳು ಸಾವನ್ನಪ್ಪಿವೆ. ಶಾಲೆ ಸಮೀಪ ಮಠದ ಜಾಗದಲ್ಲಿ ಎಮ್ಮೆಗಳನ್ನು ಮೇಯಿಸಿಕೊಂಡು ಸಂಜೆ ಮನೆಗೆ ಹೊಡೆದುಕೊಂಡು ಹೋಗುವಾಗ ಬಸ್ ಡಿಕ್ಕಿ ಹೊಡೆದಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಭದ್ರಾವತಿ ನಗರಸಭೆಗೆ ನೂತನ ಉಪಾಧ್ಯಕ್ಷ, ಕುತೂಹಲ ಮೂಡಿಸಿದ ಮೂವರು ಬಿಜೆಪಿ ಸದಸ್ಯರ ನಡೆ
20 ಲಕ್ಷ ರೂ. ಮೌಲ್ಯದ ಒಡವೆ ನಾಪತ್ತೆ
ಶಿವಮೊಗ್ಗ ಲೈವ್.ಕಾಂ : ಮನೆಯ ಬೀರುವಿನಲ್ಲಿಟ್ಟಿದ್ದ 20 ಲಕ್ಷ ರೂ. ಮೌಲ್ಯದ ಒಡವೆಗಳು ಕಳ್ಳತನವಾಗಿದೆ. ವಿನೋದಾ ಎಂಬುವವರು ತಮ್ಮ ಮನೆಯ ಬೀರುವಿನಲ್ಲಿಟ್ಟಿದ್ದ ಹಲವು ಒಡವೆ ಕಳ್ಳತನವಾಗಿದೆ. ಒಂದಷ್ಟು ಒಡವೆ ಕಳುವಾಗಿದ್ದು, ಮತ್ತಷ್ಟು ಒಡವೆ, ನಗದು ಅಲ್ಲಿಯೇ ಇದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಸಾಗರದಲ್ಲಿ ಸಾಲಬಾಧೆಗೆ ರೈತ ಆತ್ಮಹತ್ಯೆ
LATEST NEWS
- ಶಿವಮೊಗ್ಗದಲ್ಲಿ ನಾಳೆಯಿಂದ ಎರಡು ದಿನ ಸಾಹಿತ್ಯ ಸಮ್ಮೇಳನ, ಯಾರೆಲ್ಲ ಭಾಗವಹಿಸ್ತಿದ್ದಾರೆ?

- ನವುಲೆ ಬಳಿ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು, ಹೇಗಿತ್ತು ಕಾರ್ಯಾಚರಣೆ?

- ಹೊಂಬುಜದಲ್ಲಿ ಬೆಳ್ಳಿ ರಥೋತ್ಸವ, ಜಾತ್ರೆಯಲ್ಲಿ ಏನೇನಲ್ಲ ಪೂಜೆ ನಡೆಯಿತು?

- ಜನವರಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

- ಕಾರ್ಗಲ್ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

About The Editor
ನಿತಿನ್ ಆರ್.ಕೈದೊಟ್ಲು





