ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 2 SEPTEMBER 2024 : ಬೀಡಿ, ಸಿಗರೇಟ್ ನೀಡುವಂತೆ ಆಗ್ರಹಿಸಿ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು (Jail Inmates) ಪ್ರತಿಭಟನೆ ನಡೆಸಿದರು. ಇಂದು ಬೆಳಗ್ಗೆ ಜೈಲಿನಲ್ಲಿ ಉಪಹಾರ ಸೇವಿಸದೆ ಕೈದಿಗಳು ಪ್ರತಿಭಟಿಸಿದರು.
ಜೈಲು ಮ್ಯಾನುಯಲ್ನಲ್ಲಿ ನಿಷೇಧಿತ ವಸ್ತುಗಳು ಎಂಬ ಕಾರಣಕ್ಕೆ ಬೀಡಿ, ಸಿಗರೇಟ್ ಕೊಂಡೊಯ್ಯಲು ಕೈಗರಿಕ ಭದ್ರತಾ ಪಡೆ ಮತ್ತು ಜೈಲು ಸಿಬ್ಬಂದಿ ನಿರ್ಬಂಧ ವಿಧಿಸಿದ್ದಾರೆ. ಹಾಗಾಗಿ ಕೈದಿಗಳಿಗೆ ಬೀಡಿ, ಸಿಗರೇಟ್ ದೊರೆಯುತ್ತಿಲ್ಲ. ಬೀಡಿ, ಸಿಗರೇಟು ಕೊಡಬೇಕು ಎಂದು ಆಗ್ರಹಿಸಿ ಕೈದಿಗಳು ಇಂದು ಬೆಳಗ್ಗೆ ಉಪಹಾರ ತ್ಯಜಿಸಿ ಪ್ರತಿಭಟಿಸಿದರು. ಬಳಿಕ ಜೈಲು ಅಧಿಕಾರಿಗಳು ತಿಳಿ ಹೇಳಿದ್ದರಿಂದ ಕೈದಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ ⇒ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ, ಮೂಲೆ ಮೂಲೆ ಶೋಧಿಸಿದ ಖಾಕಿ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸಿಗರೇಟು ಸೇದುತ್ತಿರುವ ಫೋಟೊ ವೈರಲ್ ಆಗಿತ್ತು. ಇದರ ಬೆನ್ನಿಗೆ ಶಿವಮೊಗ್ಗ ಜೈಲಿನ ಮೇಲೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಈ ವೇಳೆ ಬೀಡಿ, ಸಿಗರೇಟು, ಬೆಂಕಿ ಪೊಟ್ಟಣಗಳು ಸಿಕ್ಕಿದ್ದವು. ಸದ್ಯ ಜೈಲು ಭದ್ರತೆ ನೋಡಿಕೊಳ್ಳುತ್ತಿರುವ ಕೆಎಸ್ಐಎಸ್ಎಫ್ ಸಿಬ್ಬಂದಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಜೈಲು ಅಧಿಕಾರಿಗಳು ನಿಷೇಧಿತ ವಸ್ತುಗಳ ಜೈಲಿನೊಳಗೆ ಕೊಂಡೊಯ್ಯದಂತೆ ನಿರ್ಬಂಧ ವಿಧಿಸಿದ್ದಾರೆ.
ಇದನ್ನೂ ಓದಿ ⇒ ವಾಟ್ಸಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















