ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 2 SEPTEMBER 2024 : ಸಾಲಕ್ಕೆ ಮಿತಿ ಮೀರಿದ ಬಡ್ಡಿ (Interest) ವಸೂಲಿ ಮಾಡಿದ್ದಲ್ಲದೆ ಮತ್ತಷ್ಟು ಹಣ ನೀಡುವಂತೆ ಪೀಡಿಸುತ್ತಿದ್ದ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಖಾಲಿ ಚೆಕ್ಗಳಲ್ಲಿ ಇಷ್ಟ ಬಂದಷ್ಟು ಹಣ ನಮೂದು ಮಾಡಿ ಗಂಡ, ಹೆಂಡತಿಯನ್ನು ಜೈಲಿಗೆ ಕಳುಹಿಸುವ ಬೆದರಿಕೆ ಒಡ್ಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಬಾಪೂಜಿನಗರದ ಹಸೀನಾ ಬಾನು ಎಂಬುವವರು ಮಹಿಳೆಯೊಬ್ಬರಿಂದ 1.70 ಲಕ್ಷ ರೂ. ಸಾಲ ಪಡೆದಿದ್ದರು. ಇದಕ್ಕೆ ಸಾಕ್ಷಿಯಾಗಿ ಎರಡು ಬಾಂಡ್, ಹಸೀನಾ ಬಾನು ಅವರ ಪತಿಯ ಬ್ಯಾಂಕ್ ಖಾತೆಯ ಎರಡು ಖಾಲಿ ಚೆಕ್ಗಳನ್ನು ಮಹಿಳೆ ಪಡೆದುಕೊಂಡಿದ್ದಳು ಎಂದು ಆರೋಪಿಸಲಾಗಿದೆ. ಸಾಲದ ಮೊತ್ತಕ್ಕೆ ಶೇ.20ರಷ್ಟು ಬಡ್ಡಿ ವಸೂಲಿ ಮಾಡಿದ್ದು, ಈವರೆಗೂ ಸುಮಾರು 5 ಲಕ್ಷ ರೂ. ಬಡ್ಡಿ ಕಟ್ಟಲಾಗಿದೆ. ಹೀಗಿದ್ದೂ ಮತ್ತಷ್ಟು ಮೊತ್ತ ಪಾವತಿಸುವಂತೆ ಮಹಿಳೆ ಒತ್ತಾಯಿಸುತ್ತಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹೆಚ್ಚುವರಿ ಮೊತ್ತ ಕಟ್ಟದೆ ಇದ್ದಲ್ಲಿ ಖಾಲಿ ಚೆಕ್ನಲ್ಲಿ ಇಷ್ಟ ಬಂದಷ್ಟು ಹಣ ನಮೂದು ಮಾಡಿ, ಹಸೀನಾ ಬಾನು ಮತ್ತು ಅವರ ಗಂಡನನ್ನು ಜೈಲಿಗೆ ಕಳುಹಿಸುವುದಾಗಿ ಮಹಿಳೆ ಬೆದರಿಕೆ ಒಡ್ಡಿದ್ದಳು ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೋಟೆ ಠಾಣೆಗೆ ಹಸೀನಾ ಬಾನು ದೂರು ನೀಡಿದ್ದಾರೆ. ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಅಧಿನಿಯಮದ ಅಡಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸೆಪ್ಟೆಂಬರ್ ತಿಂಗಳು, ಕರ್ನಾಟಕದಲ್ಲಿ 9 ದಿನ ಬ್ಯಾಂಕುಗಳಿಗೆ ರಜೆ, ಕಾರಣವೇನು?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















