SHIMOGA, 3 SEPTEMBER 2024 : ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮೈಸೂರಿಗೆ ತೆರಳಿದ್ದ ವೇಳೆ ಮನೆಯ ಬಾಗಿಲಿನ ಬೀಗ ಮುರಿದು (Theft) ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಹರಕೆರೆ ಗ್ರಾಮದ ವೀರೇಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವೀರೇಶ್ ಅವರ ಕುಟುಂಬದವರು ಆ.31ರಂದು ರಾತ್ರಿ ಮೈಸೂರಿಗೆ ತೆರಳಿದ್ದರು. ಮರುದಿನ ಬೆಳಗ್ಗೆ ಎದುರು ಮನೆಯವರು ಕರೆ ಮಾಡಿ, ಕಳ್ಳತನವಾಗಿರುವ ಕುರಿತು ಮಾಹಿತಿ ನೀಡಿದ್ದರು. ಕೂಡಲೆ ಮೈಸೂರಿನಿಂದ ವೀರೇಶ್ ಅವರು ಹಿಂತಿರುಗಿದ್ದರು. ಬಾಗಲಿನ ಬೀಗವನ್ನು ಮೀಟಿ ತೆಗೆದು ಒಳ ಹೋಗಿದ್ದ ಕಳ್ಳರು 3.66 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದರು.
ಏನೆಲ್ಲ ಕಳ್ಳತನವಾಗಿದೆ?
ಒಳ ಮನೆಯಲ್ಲಿದ್ದ ಬೀರುವಿನಲ್ಲಿ ಇಟ್ಟಿದ್ದ ಚಿನ್ನದ ಕಿವಿ ಓಲೆಗಳು, ಮಾಂಗಲ್ಯ ಸರ, ಉಂಗುರಗಳು ಕಳ್ಳತನವಾಗಿದೆ. 85 ಸಾವಿರ ರೂ. ನಗದು ಕೂಡ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ | ಇವತ್ತು ವಾರ್ಷಿಕ ಮಹಾಸಭೆ – 3 ಫಟಾಫಟ್ ನ್ಯೂಸ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






