ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI, 4 SEPTEMBER 2024 : ನೀರಿನ ತೊಟ್ಟಿಗೆ ಬಿದ್ದಿದ್ದ ಹಸುವೊಂದನ್ನು ಭದ್ರಾವತಿ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ (RESCUED). ಹೊಳೆಗಂಗೂರು ಗ್ರಾಮದಲ್ಲಿ ಸೋಮವಾರ ಸಂಜೆ ಹಸುವೊಂದು ನೀರಿನ ತೊಟ್ಟಿಗೆ ಬಿದ್ದಿತ್ತು.
ಹೊಳೆಗಂಗೂರು ಗ್ರಾಮದಲ್ಲಿ ಮನೆ ಕಟ್ಟುತ್ತಿದ್ದು ಅದಕ್ಕಾಗಿ ಎಂಟು ಅಡಿ ಆಳದ ಸಂಪ್ ನಿರ್ಮಾಣ ಮಾಡಲಾಗಿತ್ತು. ಅದರ ಕೆಲಸ ಪೂರ್ಣಗೊಳ್ಳದ ಹಿನ್ನೆಲೆ ಅಡಿಕೆ ದಬ್ಬೆ ಹಾಕಿ ಮುಚ್ಚಲಾಗಿತ್ತು. ಮಾಮೂಲಿಯಂತೆ ಕೊಟ್ಟಿಗೆಗೆ ಹೋಗಬೇಕಿದ್ದ ಹಸು ಅಕಸ್ಮಾತ್ ಸಂಪ್ ಮೇಲೆ ಮುಚ್ಚಿದ್ದ ಅಡಿಕೆ ದಬ್ಬೆ ಮೇಲೆ ಕಾಲಿಟ್ಟಿದ್ದು, ಸಂಪ್ಗೆ ಬಿದ್ದಿದೆ.
ತಕ್ಷಣ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಹಸುವಿಗೆ ಬೆಲ್ಟ್ ಕಟ್ಟಿ ಜೆಸಿಬಿ ಸಹಾಯದಿಂದ ಮೇಲಕ್ಕೆ ಎತ್ತಿದ್ದಾರೆ. ಹಸುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆರೋಗ್ಯದಿಂದ ಇದೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಎಸ್ಎಸ್ಒ ಹುಲಿಯಪ್ಪ, ಸಿಬ್ಬಂದಿ ಅಶೋಕ್ ಕುಮಾರ್, ಶೇಖರ್, ಸುರೇಶ್, ರಾಜ ನಾಯಕ್ ಸೇರಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಇದನ್ನೂ ಓದಿ » GOOD MORNING ಶಿವಮೊಗ್ಗ | ಇಡೀ ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್ನಲ್ಲಿ
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು















