ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOSANAGARA, 6 SEPTEMBER 2024 : ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ (Husband) ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಹೊಸನಗರ ತಾಲೂಕು ಪಟಗುಪ್ಪ ಸೇತುವೆ ಸಮೀಪ ಇವತ್ತು ಪತಿಯ ಮೃತದೇಹ ಪತ್ತೆಯಾಗಿದೆ.
ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದ ಸದಾನಂದ ಭಟ್ ಅವರ ಮೃತದೇಹ ಪಟಗುಪ್ಪ ಸೇತುವೆ ಸಮೀಪ ಪತ್ತೆಯಾಗಿದೆ. ಹೊಸನಗರ ಪೊಲೀಸರು ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಕ್ಷುಲಕ ಕಾರಣಕ್ಕೆ ಸದಾನಂದ ಭಟ್ ಮತ್ತು ಅವರ ಪತ್ನಿ ಸಬೀತಾ ಅವರ ಮಧ್ಯೆ ಬುಧವಾರ ರಾತ್ರಿ ಜಗಳವಾಗಿ, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಸಬೀತಾ ಅವರನ್ನು ಸ್ಥಳೀಯರು ರಿಪ್ಪನ್ಪೇಟೆ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ಸಂಬಂಧ ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ಬೆನ್ನಿಗೆ ಸದಾನಂದ ಭಟ್ ನಾಪತ್ತೆಯಾಗಿದ್ದರು.» ಪತ್ನಿ ಮೇಲೆ ಹಲ್ಲೆ ನಡೆಸಿ ನಾಪತ್ತೆ
ಪಟಗುಪ್ಪ ಸೇತುವೆ ಬಳಿ ಕಾರು
ಇನ್ನು, ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಟಗುಪ್ಪ ಸೇತುವೆ ಸಮೀಪ ಗುರುವಾರ ಸದಾನಂದ ಭಟ್ ಅವರ ಕಾರು ಪತ್ತೆಯಾಗಿತ್ತು. ಈ ಹಿನ್ನೆಲೆ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಇವತ್ತು ಸೇತುವೆ ಸನಿಹ ಸದಾನಂದ ಭಟ್ ಅವರ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಹೊಸನಗರ ಮತ್ತು ರಿಪ್ಪನ್ಪೇಟೆ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಅಪಾರ್ಟ್ಮೆಂಟ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















