SHIMOGA, 7 SEPTEMBER 2024 : ಕೆಲಸಕ್ಕೆ (worker) ಸೇರಿದ ಎರಡೇ ದಿನದಲ್ಲಿ 2.75 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ಕದ್ದು ವ್ಯಕ್ತಿ ಪರಾರಿಯಾಗಿದ್ದಾನೆ. ಶಿವಮೊಗ್ಗದ ತಿರುಪಾಳ್ಳಯ್ಯನ ಕೇರಿಯ ಜ್ಯುವೆಲರಿ ಶಾಪ್ ಒಂದರಲ್ಲಿ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಕಲ್ಕತ್ತಾ ಮೂಲದ ಸುಫೀಕ್ ಉಲ್ ಎಂಬಾತ ಆಗಸ್ಟ್ 31ರಂದು ಇಲ್ಲಿ ಕೆಲಸಕ್ಕೆ ಸೇರಿದ್ದ. ಕಸೂತಿ ಕೆಲಸ ಮಾಡುವಂತೆ ಆತನಿಗೆ ಜ್ಯುವೆಲರಿ ಶಾಪ್ ಮಾಲೀಕ 40 ಗ್ರಾಂ ಚಿನ್ನದ ಗಟ್ಟಿ ನೀಡಿದ್ದರು. ಸೆಪ್ಟೆಂಬರ್ 2ರಂದು ಸಂಜೆ ತಿಂಡಿ ತಿಂದು ಬರುವುದಾಗಿ ತಿಳಿಸಿ ಆತ ಅಂಗಡಿಯಿಂದ ಹೋಗಿದ್ದ. ಬಹು ಹೊತ್ತಿನ ತನಕ ಹಿಂತಿರುಗಿರಲಿಲ್ಲ.
ಅನುಮಾನಗೊಂಡ ಮಾಲೀಕ ಪರಿಶೀಲಿಸಿದಾಗ ಚಿನ್ನದ ಗಟ್ಟಿ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಸುಫೀಕ್ ಉಲ್ ಚಿನ್ನದ ಗಟ್ಟಿಯೊಂದಿಗೆ ಪರಾರಿಯಾಗಿದ್ದಾನೆ ಎಂದು ದೂರು ನೀಡಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಜಗಮಗ ಕಂಗೊಳಿಸಿದ ಗಾಜನೂರಿನ ತುಂಗಾ ಜಲಾಶಯ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200