ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 7 SEPTEMBER 2024 : ಕೆಲಸಕ್ಕೆ (worker) ಸೇರಿದ ಎರಡೇ ದಿನದಲ್ಲಿ 2.75 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ಕದ್ದು ವ್ಯಕ್ತಿ ಪರಾರಿಯಾಗಿದ್ದಾನೆ. ಶಿವಮೊಗ್ಗದ ತಿರುಪಾಳ್ಳಯ್ಯನ ಕೇರಿಯ ಜ್ಯುವೆಲರಿ ಶಾಪ್ ಒಂದರಲ್ಲಿ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಕಲ್ಕತ್ತಾ ಮೂಲದ ಸುಫೀಕ್ ಉಲ್ ಎಂಬಾತ ಆಗಸ್ಟ್ 31ರಂದು ಇಲ್ಲಿ ಕೆಲಸಕ್ಕೆ ಸೇರಿದ್ದ. ಕಸೂತಿ ಕೆಲಸ ಮಾಡುವಂತೆ ಆತನಿಗೆ ಜ್ಯುವೆಲರಿ ಶಾಪ್ ಮಾಲೀಕ 40 ಗ್ರಾಂ ಚಿನ್ನದ ಗಟ್ಟಿ ನೀಡಿದ್ದರು. ಸೆಪ್ಟೆಂಬರ್ 2ರಂದು ಸಂಜೆ ತಿಂಡಿ ತಿಂದು ಬರುವುದಾಗಿ ತಿಳಿಸಿ ಆತ ಅಂಗಡಿಯಿಂದ ಹೋಗಿದ್ದ. ಬಹು ಹೊತ್ತಿನ ತನಕ ಹಿಂತಿರುಗಿರಲಿಲ್ಲ.

ಅನುಮಾನಗೊಂಡ ಮಾಲೀಕ ಪರಿಶೀಲಿಸಿದಾಗ ಚಿನ್ನದ ಗಟ್ಟಿ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಸುಫೀಕ್ ಉಲ್ ಚಿನ್ನದ ಗಟ್ಟಿಯೊಂದಿಗೆ ಪರಾರಿಯಾಗಿದ್ದಾನೆ ಎಂದು ದೂರು ನೀಡಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಜಗಮಗ ಕಂಗೊಳಿಸಿದ ಗಾಜನೂರಿನ ತುಂಗಾ ಜಲಾಶಯ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





