ತೀರ್ಥಹಳ್ಳಿಯ ಯುವಕನಿಗೆ 5 ವರ್ಷ ಜೈಲು, 50 ಸಾವಿರ ರೂ. ದಂಡ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 14 SEPTEMBER 2024 : ಜಮೀನಿಗೆ ತೆರಳುವ ಜಾಗದ ವಿಚಾರದಲ್ಲಿ ಉಂಟಾದ ಜಗಳದಲ್ಲಿ (Altercation) ವೃದ್ಧರೊಬ್ಬರಿಗೆ ಗುಂಡು ಹಾರಿಸಿ ಗಾಯಗೊಳಿಸಿದ್ದ ವ್ಯಕ್ತಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ತೀರ್ಥಹಳ್ಳಿ ತಾಲ್ಲೂಕಿನ ಜಟ್ಟಿನಮಕ್ಕಿ ಗ್ರಾಮದ ಅಶೋಕ (62) ಶಿಕ್ಷೆಗೆ ಒಳಗಾದವನು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

2018ರ ಏಪ್ರಿಲ್ 23ರಂದು ಜಟ್ಟಿನಮಕ್ಕಿಯ ಕೃಷ್ಣಮೂರ್ತಿ (64) ಮೇಲೆ ಗುಂಡು ಹಾರಿಸಿದ್ದನು. ಕೃಷ್ಣಮೂರ್ತಿ ಅವರ ಕತ್ತಿನ ಭಾಗಕ್ಕೆ ಗುಂಡು ತಗುಲಿ ತೀವ್ರ ಸ್ವರೂಪದ ಗಾಯವಾಗಿತ್ತು. ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತೀರ್ಥಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್‌ ಸುರೇಶ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ದೃಢಪಟ್ಟ ಹಿನ್ನೆಲೆ ಶಿಕ್ಷೆ ವಿಧಿಸಿದೆ.

Shimoga-Court-Complex

ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 5 ತಿಂಗಳು ಸಾದಾ ಸೆರೆವಾಸ ಶಿಕ್ಷೆ ಅನುಭವಿಸುವಂತೆ ಹಾಗೂ ದಂಡದ ಮೊತ್ತದಲ್ಲಿ ಕೃಷ್ಣಮೂರ್ತಿ ಅವರಿಗೆ ಪರಿಹಾರ ರೂಪದಲ್ಲಿ 25 ಸಾವಿರ ರೂ. ನೀಡುವಂತೆ ಆದೇಶಿಸಿದೆ. ಸರ್ಕಾರದ ಪರವಾಗಿ ವಕೀಲ ಎ.ಎಂ.ಸುರೇಶ್ ಕುಮಾರ್ ವಾದ ಮಂಡಿಸಿದ್ದರು.

ಇದನ್ನೂ ಓದಿ » 70 ವರ್ಷದ ವೃದ್ಧನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment