SHIMOGA NEWS, 15 SEPTEMBER 2024 : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆ.15 ಮತ್ತು 16ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?
ಸೆ.15ರಂದು ಬೆಳಗ್ಗೆ 8.50ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 9.15ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11.30ಕ್ಕೆ ಸೊರಬದ ರಂಗಮಂದಿರದಲ್ಲಿ ತಾಲೂಕಿನ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಸೊರಬದ ಹೊಸಬಾಳೆಯಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘದ ಅಮೃತ ಮಹೋತ್ಸವ ಕಾಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಸೆ.16ರಂದು ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 10 ಗಂಟೆಗೆ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 12ಕ್ಕೆ ಶಿರಾಳಕೊಪ್ಪ ಪಟ್ಟಣದಲ್ಲಿ 50 ಹಾಸಿಗೆಗೆ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ » ಬೈಕ್ ಓಡಿಸಿದ್ದು ಮಗ, ಭಾರಿ ದಂಡ ಕಟ್ಟಬೇಕಾಯ್ತು ಅಪ್ಪ, ಏನಿದು ಕೇಸ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200