ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 15 SEPTEMBER 2024 : ಈ ರಸ್ತೆಯಲ್ಲಿ ಓಡಾಡುವ ಬಹುತೇಕರು ಶಿವಮೊಗ್ಗಕ್ಕೆ ಮತ್ತೆ ಪ್ರಧಾನ ಮಂತ್ರಿ ಬರಲಿ, ಮುಖ್ಯಮಂತ್ರಿ ಭೇಟಿ ನೀಡಲಿ ಎಂದು ಹಂಬಲಿಸುತ್ತಿದ್ದಾರೆ. ಈ ರಸ್ತೆಯಲ್ಲಿರುವ ಗುಂಡಿಗಳೇ (Pot Hole) ಇಂತಹ ತವಕಕ್ಕೆ ಕಾರಣ.
ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಆಗಮಿಸುವವರನ್ನು ಶಿವಮೊಗ್ಗ ನಗರದೊಳಗೆ ಕರೆತಂದು ಬಿಡುವುದೇ ಬಿ.ಹೆಚ್.ರಸ್ತೆ. ಆದರೆ ಈ ರಸ್ತೆಯಲ್ಲಿ ಭಾರಿ ಗುಂಡಿಗಳು ಪ್ರತ್ಯಕ್ಷವಾಗಿವೆ. ಒಂದಕ್ಕಿಂತಲು ಒಂದು ಅಪಾಯಕಾರಿಯಾಗಿವೆ.
ಎಲ್ಲೆಲ್ಲಿ ಹೇಗಿವೆ ಗುಂಡಿಗಳು?
» ಎಂ.ಆರ್.ಎಸ್ ವೃತ್ತದಲ್ಲಿ ಭಾರಿ ಗಾತ್ರದ ಗುಂಡಿಗಳು ಸೃಷ್ಟಿಯಾಗಿವೆ. ತಿರುವಿನಲ್ಲೇ ಗುಂಡಿಗಳು ಬಾಯ್ತೆರೆದಿವೆ. ಇದು ವಾಹನ ಸವಾರರಿಗೆ ತೀವ್ರ ಸಮಸ್ಯೆ ಉಂಟು ಮಾಡಿವೆ.

» ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ರಸ್ತೆಯ ಎರಡು ಬದಿಯಲ್ಲೂ ಗುಂಡಿಗಳಾಗಿವೆ. ವಾಹನದ ವೇಗ ಹೆಚ್ಚಿದ್ದರೆ ಈ ಗುಂಡಿಗಳ ಬಳಿ ನಿಯಂತ್ರಣ ಸುಲಭದ ಮಾತಲ್ಲ. ಇದೇ ಕಾರಣಕ್ಕೆ ಇಲ್ಲಿ ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ ಅನ್ನುತ್ತಾರೆ ಸ್ಥಳೀಯರು.
» ವಿದ್ಯಾನಗರದ ಭಾಗದಲ್ಲಿಯು ಬಿ.ಹೆಚ್.ರಸ್ತೆಯಲ್ಲಿ ಗುಂಡಿಗಳಾಗಿವೆ. ಜನಸಂದಣಿ ಮತ್ತು ವಾಹನ ದಟ್ಟಣೆಯು ಇಲ್ಲಿ ಹೆಚ್ಚು. ಇಂತಹ ರಸ್ತೆಯಲ್ಲಿ ಗುಂಡಿಯಾಗಿ ಜನ ಮತ್ತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.

» ಮಹಾದೇವಿ ಟಾಕೀಸ್ ಬಳಿ ನೂತನ ಪೆಟ್ರೋಲ್ ಬಂಕ್ನ ಮುಂಭಾಗ ಭಾರಿ ಗಾತ್ರದ ಗುಂಡಿಯಾಗಿದೆ. ಅಪಾಯ ತಪ್ಪಿಸಲು ಸ್ಥಳೀಯರೆ ಆಗಾಗ ಈ ಗುಂಡಿಗೆ ಮಣ್ಣು ಹಾಕಿ, ಕಲ್ಲು ಹಾಕಿ ಸಮತಟ್ಟುಗೊಳಿಸುತ್ತಿದ್ದಾರೆ.
» ಎಂ.ಆರ್.ಎಸ್ ಸರ್ಕಲ್ನಿಂದ ತುಂಗಾ ಸೇತುವೆವರೆಗೆ ಹಲವು ಕಡೆ ಹತ್ತಾರು ಬೃಹತ್ ಗುಂಡಿಗಳಾಗಿವೆ. ನಿತ್ಯ ಇದೇ ರಸ್ತೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಓಡಾಡುತ್ತಾರೆ. ಆದರೆ ಗುಂಡಿ ಮುಚ್ಚಿಸುವ ಪ್ರಯತ್ನವಾಗದಿರುವುದು ವಿಪರ್ಯಾಸ.

ಸಿಎಂ, ಪಿಎಂ ಬರಲಿ
ಬಿ.ಹೆಚ್.ರಸ್ತೆ, ಎಂ.ಆರ್.ಎಸ್ ಸರ್ಕಲ್ನಲ್ಲಿ ಭಾರಿ ವಾಹನಗಳ ಸಂಚಾರ ಹೆಚ್ಚು. ಇದೇ ಕಾರಣಕ್ಕೆ ಆಗಾಗ ಇಲ್ಲಿ ರಸ್ತೆಯಲ್ಲಿ ಗುಂಡಿಗಳಾಗುತ್ತವೆ. ಲೋಕಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾಗ ಇಲ್ಲಿದ್ದ ಬೃಹತ್ ಗುಂಡಿಗಳನ್ನು ಮುಚ್ಚಿದ್ದರು. ಈ ಹಿಂದೆ ಮುಖ್ಯಮಂತ್ರಿ ಭೇಟಿ ವೇಳೆ ಗುಂಡಿಗಳನ್ನು ಬಂದ್ ಮಾಡಲಾಗಿತ್ತು. ಈಗ ಪುನಃ ಗಜಗಾತ್ರದ ಗುಂಡಿಗಳಾಗಿದ್ದು, ಮತ್ತೆ ಗಣ್ಯರು ಶಿವಮೊಗ್ಗಕ್ಕೆ ಬರಲಿ ಎಂದು ಜನರು ಹಂಬಲಿಸುತ್ತಿದ್ದಾರೆ.
ಇದನ್ನೂ ಓದಿ » ಬೈಕ್ ಓಡಿಸಿದ್ದು ಮಗ, ಭಾರಿ ದಂಡ ಕಟ್ಟಬೇಕಾಯ್ತು ಅಪ್ಪ, ಏನಿದು ಕೇಸ್?
LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು















