ಶಿವಮೊಗ್ಗ ಡಿ.ಸಿ. ಕಚೇರಿ ಚರಾಸ್ತಿ ಜಪ್ತಿಗೆ ಕೋರ್ಟ್‌ ಆದೇಶ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 17 SEPTEMBER 2024 : ರಸ್ತೆ ಅಭಿವೃದ್ಧಿಗಾಗಿ ವ್ಯಕ್ತಿಯೊಬ್ಬರ ಭೂಮಿ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿ (Confiscate) ಮಾಡುವಂತೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

» ಏನಿದು ಪ್ರಕರಣ?

ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಅಗಡಿ ಆಶೋಕ್ ಎಂಬುವರಿಗೆ ಸೇರಿದ ನಿವೇಶನದ ಸ್ವಲ್ಪ ಭಾಗವನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಕೆ-ಶಿಪ್) 2011ರಲ್ಲಿ ವಶಪಡಿಸಿಕೊಂಡಿತ್ತು. ನಿವೇಶನಕ್ಕೆ ಸಂಬಂಧಿಸಿ ಕಾನೂನುಬದ್ಧವಾಗಿ ಪರಿಹಾರ ನೀಡಿಲ್ಲ ಎಂದು ನಿವೇಶನದ ಮಾಲೀಕ ಅಗಡಿ ಅಶೋಕ್ ನ್ಯಾಯಾಲಯದ ಮೆಟ್ಟಿಲೇರಿದ್ದರು.

Banana-Mandi-In-Shimoga-APMC

ಹೈಕೋರ್ಟ್ ನಿರ್ದೇಶನದಂತೆ ಅಗಡಿ ಅಶೋಕ್ ಅವರಿಗೆ ಮೂರು ತಿಂಗಳ ಒಳಗೆ 3.93 ಕೋಟಿ ರೂ. ಸೇರಿ ಒಟ್ಟು 4.44 ಕೋಟಿ ರೂ. ಪರಿಹಾರ ನೀಡುವಂತೆ ಸೂಚಿಸಲಾಗಿತ್ತು.

himoga-DC-office-and-Police-jeep-in-front-of-office

ಪರಿಹಾರ ವಿಳಂಬ, ಚರಾಸ್ತಿ ಜಪ್ತಿಗೆ ಆದೇಶ

ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನೆಲೆ ಜಿಲ್ಲಾ ನ್ಯಾಯಾಲಯವು ಜಿಲ್ಲಾಧಿಕಾರಿ ಕಚೇರಿಯ ಚರಾಸ್ತಿಯಾದ ಪೀಠೋಪಕರಣ ಜಪ್ತಿ ಮಾಡಬೇಕು. ಮುಂದಿನ ಆದೇಶದವರೆಗೆ ವಶಕ್ಕೆ ಪಡೆಯುವಂತೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ದೂರುದಾರರ ಪರವಾಗಿ ಸೊರಬ ವಕೀಲ ಪಿ.ವಿ.ಖರೆ ಹಾಗೂ ದಿನಕ‌ರ್ ಭಟ್ ಭಾವೆ ವಾದ ಮಂಡಿಸಿದ್ದರು.

HS-Sundaresh

ಇದನ್ನೂ ಓದಿ » ದಿಢೀರ್‌ ಬಲಕ್ಕೆ ತಿರುಗಿದ ಲಾರಿ, ಬೈಕ್‌ ಸವಾರ ಮೆಗ್ಗಾನ್‌ಗೆ ದಾಖಲು – 3 ಫಟಾಫಟ್‌ ನ್ಯೂಸ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment