SHIMOGA NEWS, 17 SEPTEMBER 2024 : ರಸ್ತೆ ಅಭಿವೃದ್ಧಿಗಾಗಿ ವ್ಯಕ್ತಿಯೊಬ್ಬರ ಭೂಮಿ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿ (Confiscate) ಮಾಡುವಂತೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಅಗಡಿ ಆಶೋಕ್ ಎಂಬುವರಿಗೆ ಸೇರಿದ ನಿವೇಶನದ ಸ್ವಲ್ಪ ಭಾಗವನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಕೆ-ಶಿಪ್) 2011ರಲ್ಲಿ ವಶಪಡಿಸಿಕೊಂಡಿತ್ತು. ನಿವೇಶನಕ್ಕೆ ಸಂಬಂಧಿಸಿ ಕಾನೂನುಬದ್ಧವಾಗಿ ಪರಿಹಾರ ನೀಡಿಲ್ಲ ಎಂದು ನಿವೇಶನದ ಮಾಲೀಕ ಅಗಡಿ ಅಶೋಕ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಹೈಕೋರ್ಟ್ ನಿರ್ದೇಶನದಂತೆ ಅಗಡಿ ಅಶೋಕ್ ಅವರಿಗೆ ಮೂರು ತಿಂಗಳ ಒಳಗೆ 3.93 ಕೋಟಿ ರೂ. ಸೇರಿ ಒಟ್ಟು 4.44 ಕೋಟಿ ರೂ. ಪರಿಹಾರ ನೀಡುವಂತೆ ಸೂಚಿಸಲಾಗಿತ್ತು.» ಏನಿದು ಪ್ರಕರಣ?


ಪರಿಹಾರ ವಿಳಂಬ, ಚರಾಸ್ತಿ ಜಪ್ತಿಗೆ ಆದೇಶ
ಪರಿಹಾರ ನೀಡುವಲ್ಲಿ ವಿಳಂಬವಾದ ಹಿನ್ನೆಲೆ ಜಿಲ್ಲಾ ನ್ಯಾಯಾಲಯವು ಜಿಲ್ಲಾಧಿಕಾರಿ ಕಚೇರಿಯ ಚರಾಸ್ತಿಯಾದ ಪೀಠೋಪಕರಣ ಜಪ್ತಿ ಮಾಡಬೇಕು. ಮುಂದಿನ ಆದೇಶದವರೆಗೆ ವಶಕ್ಕೆ ಪಡೆಯುವಂತೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ದೂರುದಾರರ ಪರವಾಗಿ ಸೊರಬ ವಕೀಲ ಪಿ.ವಿ.ಖರೆ ಹಾಗೂ ದಿನಕರ್ ಭಟ್ ಭಾವೆ ವಾದ ಮಂಡಿಸಿದ್ದರು.

ಇದನ್ನೂ ಓದಿ » ದಿಢೀರ್ ಬಲಕ್ಕೆ ತಿರುಗಿದ ಲಾರಿ, ಬೈಕ್ ಸವಾರ ಮೆಗ್ಗಾನ್ಗೆ ದಾಖಲು – 3 ಫಟಾಫಟ್ ನ್ಯೂಸ್
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





