SHIMOGA NEWS, 19 SEPTEMBER 2024 : ರಸ್ತೆ ದಾಟುತ್ತಿದ್ದ ಹೆಬ್ಬಾವಿನ (Python) ಮೇಲೆ ವಾಹನ ಹರಿದು ಗಂಭೀರ ಗಾಯಗೊಂಡಿದೆ. ಗ್ರಾಮಸ್ಥರು ಹೆಬ್ಬಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆ ಒಪ್ಪಿಸಿದ್ದಾರೆ. ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಹೆಬ್ಬಾವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹಣಗೆರೆ ರಸ್ತೆಯ ಖಾಸಗಿ ಶಾಲೆ ಬಳಿ ವಾಹನ ಹರಿದು ಹೆಬ್ಬಾವು ಗಾಯಗೊಂಡಿತ್ತು. ರಸ್ತೆ ದಾಟುವಾಗ ವಾಹನವೊಂದು ತಲೆ ಮೇಲೆ ಹರಿದು ಹಾವು ಗಾಯಗೊಂಡಿತ್ತು. ರಸ್ತೆ ಪಕ್ಕದ ಗಿಡಗಂಟಿ ಮಧ್ಯೆ ಒದ್ದಾಡುತ್ತಿತ್ತು.
![]() |
ಇದನ್ನು ಗಮನಿಸಿದ ಆಯನೂರಿನ ಅರ್ಜುನ್, ಅದರ್ಶ, ಶರತ್, ಮಂಜುನಾಥ, ಆಕಾಶ್ ಎಂಬುವವರು ಉರಗ ರಕ್ಷಕ ಅಮಿತ್ಗೆ ಕರೆ ಮಾಡಿ ಹಾವನ್ನು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಹೆಬ್ಬಾವಿಗೆ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಆರೈಕೆ ಮಾಡಲಾಗುತ್ತಿದೆ.
ಇದನ್ನೂ ಓದಿ » ತೆರಿಗೆ ಇಲಾಖೆಗೆ ಹೋಗಿದ್ದ ಶಿವಮೊಗ್ಗದ ಮಹಿಳಾ ಉದ್ಯಮಿಗೆ ಕಾದಿತ್ತು ಆಘಾತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200