ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 23 SEPTEMBER 2024 : ಅರ್ಹರಲ್ಲದೆ ಇದ್ದರು ಪಡಿತರ ಚೀಟಿ (Ration Card) ಹೊಂದಿದ್ದವರ ಕಾರ್ಡುಗಳನ್ನು ರದ್ದುಗೊಳಿಸಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕ ಅವಿನ್, ಕಾರ್ಡ್ ರದ್ಧತಿ ಕುರಿತು ಮಾಹಿತಿ ತಿಳಿಸಿದರು.
ಆಹಾರ ಇಲಾಖೆ ಅಧಿಕಾರಿ ಹೇಳಿದ್ದೇನು?
ಆರು ತಿಂಗಳು ಸತತವಾಗಿ ಪಡಿತರ ಪಡೆಯದ 8 ಸಾವಿರ ಕಾರ್ಡ್ಗಳನ್ನು ರದ್ದು ಮಾಡಲಾಗಿದೆ. ಇ-ಜನ್ಮ ಪೋರ್ಟಲ್ ಮಾಹಿತಿ ಆಧಾರದಲ್ಲಿ ಮರಣ ಹೊಂದಿದ 5 ಸಾವಿರ ಕಾರ್ಡುದಾರರ ಹೆಸರನ್ನು ತೆಗೆಯಲಾಗಿದೆ. 58 ಸರಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದು ಮಾಡಿ, ದಂಡ ವಿಧಿಸಲಾಗಿದೆ. ಕುಟುಂಬದ ವಾರ್ಷಿಕ ವರಮಾನ 1.20 ಲಕ್ಷ ರೂ. ಮೀರಿರುವ 2,400 ಕಾರ್ಡ್ಗಳ ರದ್ದತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅದ್ಧೂರಿ ಈದ್ ಮೆರವಣಿಗೆ, ಹೇಗಿತ್ತು? ಏನೇನಿತ್ತು?
LATEST NEWS
- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

About The Editor
ನಿತಿನ್ ಆರ್.ಕೈದೊಟ್ಲು





