ತಿರುಪತಿ ಲಡ್ಡು ವಿವಾದ, ಶಿವಮೊಗ್ಗದಲ್ಲಿ ಸ್ವಾಮೀಜಿಯ ಮೌನವ್ರತ ಆರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 23 SEPTEMBER 2024 : ತಿರುಪತಿ ಲಡ್ಡು (Laddu) ಪ್ರಸಾದದ ವಿಚಾರದಲ್ಲಿ ಅಪಪ್ರಚಾರವಾಗಿದೆ. ಇದರ ಪ್ರಾಯಶ್ಚಿತ್ತ, ದುಷ್ಟದಮನ ಮತ್ತು ಆಧ್ಯಾತ್ಮಿಕ ಶಕ್ತಿವರ್ಧನೆಗಾಗಿ ಶಿವಮೊಗ್ಗದ ಕೂಡಲಿ ಶೃಂಗೇರಿ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ಅಭಿನವ ಶಂಕರಭಾರತೀ ಸ್ವಾಮೀಜಿ ಅವರು ಉಪವಾಸ ಮತ್ತು ಮೌನವ್ರತ ಕೈಗೊಂಡಿದ್ದಾರೆ.

ಕೂಡಲಿ ಮಠದಲ್ಲಿ ಶ್ರೀ ಅಭಿನವ ಶಂಕರಭಾರತೀ ಸ್ವಾಮೀಜಿ ಅವರು ಇಂದಿನಿಂದ ಮೂರು ದಿನ ಉಪವಾಸ ಮತ್ತು ಮೌನವ್ರತ ಆರಂಭಿಸಿದ್ದಾರೆ. ಈ ಸಂಬಂಧ ಮಠದ ವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

ಪ್ರಕಟಣೆಯಲ್ಲಿ ಏನಿದೆ?

ತಿರುಪತಿಯಲ್ಲಿ ನಡೆದಿರುವುದು ಸಸ್ಯಾಹಾರ, ಮಾಂಸಾಹಾರ ಎಂಬ ಚರ್ಚೆ ಮಾಡುವಂತಹ ಸಾಮಾನ್ಯ ಘಟನೆಯಲ್ಲ. ಅಲ್ಲಿ ನಡೆದಿರುವುದು ನಂಬಿಕೆ ದ್ರೋಹ. ಹಿಂದೂ ಸಮಾಜದ ಒಟ್ಟಾರೆ ಬಲಹೀನತೆ ಮೇಲೆ ದುರುಳರು ಮಾಡರುವ ಅಟ್ಟಹಾಸ ಎಂದು ಸ್ವಾಮೀಜಿ ತಿಳಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

abhinava-shankara-bharathi-swamiji-kudli-mutt.

ದೇವಸ್ಥಾನಗಳ ಮೇಲೆ ಸರ್ಕಾರದ ಹಿಡಿತ ಹಿಂತೆಗೆದುಕೊಳ್ಳಬೇಕು ಎಂದು ಸಮಾಜ ಸರ್ಕಾರವನ್ನು ಒತ್ತಾಯಿಸಬೇಕು. ಅಲ್ಲದೆ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ. ಹಾಗಾಗಿ ಎಲ್ಲರು ತಮ್ಮ ಮನೆಯಲ್ಲಿಯೇ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ತಾಲೂಕು, ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment