‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ

SHIMOGA NEWS, 23 SEPTEMBER 2024 : ಒಕ್ಕಲಿಗ ಸಮಾಜದ (Vokkaliga)) ಅವಹೇಳನ, ದಲಿತರ ನಿಂದನೆ ಮಾಡಿರುವ ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒಕ್ಕಲಿಗ ಸಮಾಜದ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಸಂಘದ ಪ್ರಮುಖರು, ಶಾಸಕ ಮುನಿರತ್ನ ವಿರುದ್ಧ ಹರಿಹಾಯ್ದರು.

‘ಪದೇ ಪದೆ ತಪ್ಪು ಮಾಡುತ್ತಿದ್ದಾರೆʼ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಮಾತನಾಡಿ, ಮುನಿರತ್ನ ಅವರು ಈ ಹಿಂದೆ ಉರಿಗೌಡ, ನಂಜೇಗೌಡ ಪ್ರಸ್ತಾಪ ತೆಗೆದು ಅದನ್ನು ಸಿನಿಮಾ ಮಾಡುವುದಾಗಿ ಹೇಳಿದ್ದರು. ನಮ್ಮ ಸಮಾಜದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬುದ್ಧಿವಾದ ಹೇಳಿದ್ದರು. ಕ್ಷಮೆ ಕೇಳಿ ಹೋಗಿದ್ದ ಮುನಿರತ್ನ ಪದೇ ಪದೆ ಇಂತಹ ತಪ್ಪು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  

vokkaliga leaders irked against munirathna

ಮಹಿಳೆಯರ ಬಗ್ಗೆ ಅವರಿಗಿರುವ ಕೀಳು ಅಭಿರುಚಿ ಎಷ್ಟೆಂದು ಗೊತ್ತಾಗುತ್ತದೆ. ತಾಯಿಯಾಗಲಿ, ಸೋದರಿಯಾಗಲಿ ಅವರನ್ನೂ ಬಿಡದೇ ಮಂಚಕ್ಕೆ ಕರೆಯುವ ಅವರ ಮಾತುಗಳು ಅವರ ಕೆಟ್ಟ ಸಂಸ್ಕೃತಿ ತೋರಿಸುತ್ತದೆ. ಇಂತಹವರು ರಾಜಕೀಯದಲ್ಲಿ ಇರುವುದು ಸೂಕ್ತವಲ್ಲ. ಆದ್ದರಿಂದ ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಒಕ್ಕಲಿಗರ ಸಂಘದ ಜಿಲ್ಲಾ ಬಿ.ಎ.ರಮೇಶ್ ಹೆಗ್ಡೆ, ರಾಜ್ಯ ನಿರ್ದೇಶಕ ಧರ್ಮೇಶ್‌, ಪಟ್ಟಸ್ವಾಮಿ, ಭಾರತಿ ರಾಮಕೃಷ್ಣ, ಚೇತನ್‌ ಗೌಡ, ಚಂದ್ರಕಾಂತ್‌, ಸುದರ್ಶನ್‌ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಸವಳಂಗ ರಸ್ತೆ ಮೇಲ್ಸೇತುವೆ ಗುಂಡಿಗಳು ಕೊನೆಗೂ ಬಂದ್‌ | IMPACT

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : September 23, 2024 at 5:45 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 23, 2024

Leave a Comment