ತಿರುಪತಿ ಲಡ್ಡು ವಿವಾದ, ರಾಜ್ಯದಲ್ಲಿ ಎಲ್ಲ ತುಪ್ಪದ ತಪಾಸಣೆ ಆರಂಭ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

JUST MAHITI : ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ (Ghee) ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವುದು ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿವೆ. ನಂದಿನಿ ತುಪ್ಪ ಹೊರತು ಉಳಿದ ಎಲ್ಲ ಕಂಪನಿಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ತಿರುಪತಿ ಲಡ್ಡು ವಿಚಾರದಲ್ಲಿ ಜನರು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ತುಪ್ಪ ಪೂರೈಕೆಯಾಗುತ್ತಿದೆ. ಎಲ್ಲ ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದರು.

ಪ್ರತಿ ಜಿಲ್ಲೆಯಲ್ಲಿ ಮಾದರಿ ಸಂಗ್ರಹ

ಜಿಲ್ಲಾ ಅಂಕಿತಾಧಿಕಾರಿಗಳು ಪ್ರತಿ ಜಿಲ್ಲೆಯಲ್ಲಿ ತಲಾ ಐದರಂತೆ ಖಾಸಗಿ ಬ್ರ್ಯಾಂಡ್‌ಗಳ ತುಪ್ಪದ ಮಾದರಿ ಸಂಗ್ರಹಿಸಬೇಕು. ಆಯಾ ವಿಭಾಗಕ್ಕೆ ಸಂಬಂಧಿಸಿದ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಿ ವಿಶ್ಲೇಷಣೆ ನಡೆಸಬೇಕು. ಪ್ರಾಣಿಗಳ ಕೊಬ್ಬು ಇರುವ ಬಗ್ಗೆ ಗುಣಮಟ್ಟದ ವಿಶ್ಲೇಷಣೆ ನಡೆಸಬೇಕು. ಆಹಾರ ಮಾದರಿ ಸಂಗ್ರಹಣೆಯ ವಿವರಗಳನ್ನು ಪ್ರಯೋಗಾಲಯದ ಹೆಸರಿನ ಜೊತೆ ದಾಖಲಿಸಬೇಕು’ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಉಪ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್?‌ ಸಂಸದರು ಹೇಳಿದ್ದೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment