ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಕಿಡ್ನಾಪ್‌ಗೆ ಯತ್ನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

BHADRAVATHI NEWS, 28 SEPTEMBER 2024 : ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಅಪಹರಣಕ್ಕೆ (Abduct) ವಿಫಲ ಯತ್ನವಾಗಿದೆ. ಭದ್ರಾವತಿ ಪಟ್ಟಣದ ಎಪಿಎಂಸಿ ಮಾರ್ಕೆಟ್‌ ಸಮೀಪ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹತ್ತು ವರ್ಷದ ವಿದ್ಯಾರ್ಥಿನಿ (ಹೆಸರು ಗೌಪ್ಯ) ಶಾಲೆ ಮುಗಿಸಿ ಆಟೋದಲ್ಲಿ ಸಂಜೆ ಮನೆಗೆ ಮರಳಿದ್ದಳು. ಆಟೋ ಇಳಿದು ಮನೆಯತ್ತ ತೆರಳುತ್ತಿದ್ದಂತೆ ಬೈಕ್‌ನಲ್ಲಿ ಬಂದ ಅಪರಿಚಿತ, ನಿಮ್ಮ ಅಪ್ಪ ಸರ್ಕಲ್‌ಗೆ ಬಿಡಲು ತಿಳಿಸಿದ್ದಾರೆ ಎಂದು ಕರೆದೊಯ್ಯಲು ಯತ್ನಿಸಿದ್ದಾನೆ. ಬಾಲಕಿ ಬರಲು ಒಪ್ಪದಿದ್ದಾಗ ಚಾಕ್ಲೇಟ್‌ ಕೊಡಿಸುತ್ತೇನೆ ಎಂದು ಆಕೆಯ ಕೈ ಹಿಡಿದು ಎಳದೊಯ್ಯಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. 

ಅಪರಿಚಿತನಿಂದ ತಪ್ಪಿಸಿಕೊಂಡು ಮನೆಗೆ ಬಂದ ಬಾಲಕಿ ವಿಷಯ ತಿಳಿಸಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕಿಡ್ನಾಪ್‌ಗೆ ಯತ್ನಿಸಿದವರ ಕೆನ್ನೆಯ ಮೇಲೆ ಮಚ್ಚೆ ಇತ್ತು ಎಂದು ಉಲ್ಲೇಖಿಸಲಾಗಿದೆ. ಬಾಲಕಿಯ ತಂದೆಯ ದೂರಿನ ಹಿನ್ನೆಲೆ ಹೊಸಮನೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಗ್ಯಾರಂಟಿ ಯೋಜನೆ, ಶಿವಮೊಗ್ಗದಲ್ಲಿ ಮಹತ್ವದ ಮೀಟಿಂಗ್‌ಗೆ ದಿನಾಂಕ ಫಿಕ್ಸ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment