ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI NEWS, 28 SEPTEMBER 2024 : ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಅಪಹರಣಕ್ಕೆ (Abduct) ವಿಫಲ ಯತ್ನವಾಗಿದೆ. ಭದ್ರಾವತಿ ಪಟ್ಟಣದ ಎಪಿಎಂಸಿ ಮಾರ್ಕೆಟ್ ಸಮೀಪ ಘಟನೆ ಸಂಭವಿಸಿದೆ.
ಹತ್ತು ವರ್ಷದ ವಿದ್ಯಾರ್ಥಿನಿ (ಹೆಸರು ಗೌಪ್ಯ) ಶಾಲೆ ಮುಗಿಸಿ ಆಟೋದಲ್ಲಿ ಸಂಜೆ ಮನೆಗೆ ಮರಳಿದ್ದಳು. ಆಟೋ ಇಳಿದು ಮನೆಯತ್ತ ತೆರಳುತ್ತಿದ್ದಂತೆ ಬೈಕ್ನಲ್ಲಿ ಬಂದ ಅಪರಿಚಿತ, ನಿಮ್ಮ ಅಪ್ಪ ಸರ್ಕಲ್ಗೆ ಬಿಡಲು ತಿಳಿಸಿದ್ದಾರೆ ಎಂದು ಕರೆದೊಯ್ಯಲು ಯತ್ನಿಸಿದ್ದಾನೆ. ಬಾಲಕಿ ಬರಲು ಒಪ್ಪದಿದ್ದಾಗ ಚಾಕ್ಲೇಟ್ ಕೊಡಿಸುತ್ತೇನೆ ಎಂದು ಆಕೆಯ ಕೈ ಹಿಡಿದು ಎಳದೊಯ್ಯಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಅಪರಿಚಿತನಿಂದ ತಪ್ಪಿಸಿಕೊಂಡು ಮನೆಗೆ ಬಂದ ಬಾಲಕಿ ವಿಷಯ ತಿಳಿಸಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕಿಡ್ನಾಪ್ಗೆ ಯತ್ನಿಸಿದವರ ಕೆನ್ನೆಯ ಮೇಲೆ ಮಚ್ಚೆ ಇತ್ತು ಎಂದು ಉಲ್ಲೇಖಿಸಲಾಗಿದೆ. ಬಾಲಕಿಯ ತಂದೆಯ ದೂರಿನ ಹಿನ್ನೆಲೆ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಗ್ಯಾರಂಟಿ ಯೋಜನೆ, ಶಿವಮೊಗ್ಗದಲ್ಲಿ ಮಹತ್ವದ ಮೀಟಿಂಗ್ಗೆ ದಿನಾಂಕ ಫಿಕ್ಸ್
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















